Monday, March 14, 2022

ಮಾ.೧೫ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ಮಾ. ೧೩: ಮೆಸ್ಕಾಂ ಜೆಪಿಎಸ್ ಕಾಲೋನಿಯಲ್ಲಿರುವ ೧೧೦/೩೩/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ.೧೫ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.  
    ನ್ಯೂಟೌನ್, ನ್ಯೂಕಾಲೋನಿ, ಬಿ.ಎಚ್ ರಸ್ತೆ, ಐಟಿಐ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು ತಾಂಡ, ಹುತ್ತಾ ಕಾಲೋನಿ, ಜನ್ನಾಪುರ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಶಿವನಿ ವೃತ್ತ, ಹಿರಿಯೂರು, ಹೊಳೆ ಗಂಗೂರು, ಕಾರೇಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ತಡಸ, ಬಿಳಿಕಿ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ್ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಬಸವನಗುಡಿ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ ಮತ್ತು ಅರಳಿಕೊಪ್ಪ ಸೇರಿದಂತೆ ಇನ್ನಿತರರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಲಿದೆ ಎಂದು ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.  


No comments:

Post a Comment