Tuesday, March 8, 2022

ಹೆದ್ದಾರಿ ರಸ್ತೆಗೆ ತಾತ್ಕಾಲಿಕವಾಗಿ ಹಂಪ್ ಅಳವಡಿಸಲು ಆಗ್ರಹಿಸಿ ಮನವಿ


ಭದ್ರಾವತಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದ ಅಂಡರ್ ಬ್ರಿಡ್ಜ್‌ನಿಂದ ಉಂಬ್ಳೆಬೈಲು ರಸ್ತೆ ಲೋಕೋಪಯೋಗಿ ಅತಿಥಿ ಗೃಹದ ಸಮೀಪದ ಪ್ರೊ. ಬಿ. ಕೃಷ್ಣಪ್ಪ ವೃತ್ತದವರೆಗೆ ತಾತ್ಕಾಲಿಕವಾಗಿ ಹಂಪ್ ಅಥವಾ ವೇಗ ನಿಯಂತ್ರಕ ಅಳವಡಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ಮಂಗಳವಾರ ಲೋಕೋಪಯೋಗಿ ಇಲಾಖೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮಾ. ೮: ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದ ಅಂಡರ್ ಬ್ರಿಡ್ಜ್‌ನಿಂದ ಉಂಬ್ಳೆಬೈಲು ರಸ್ತೆ ಲೋಕೋಪಯೋಗಿ ಅತಿಥಿ ಗೃಹದ ಸಮೀಪದ ಪ್ರೊ. ಬಿ. ಕೃಷ್ಣಪ್ಪ ವೃತ್ತದವರೆಗೆ ತಾತ್ಕಾಲಿಕವಾಗಿ ಹಂಪ್ ಅಥವಾ ವೇಗ ನಿಯಂತ್ರಕ ಅಳವಡಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ಮಂಗಳವಾರ ಲೋಕೋಪಯೋಗಿ ಇಲಾಖೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ಈ ರಸ್ತೆ ಹೆದ್ದಾರಿ ರಸ್ತೆಯಾಗಿದ್ದು, ಪ್ರಸ್ತುತ ರಸ್ತೆಯನ್ನು ಅಗಲೀಕರಣಗೊಳಿಸಲಾಗಿದೆ. ಈ ನಡುವೆ ಕಡದಕಟ್ಟೆ ರೈಲ್ವೆ ಗೇಟ್ ಬಳಿ ರೈಲ್ವೆ ಇಲಾಖೆಯಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಈ ರಸ್ತೆಯಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದೆ. ಹೆದ್ದಾರಿ ರಸ್ತೆಯಲ್ಲಿ ಹಂಪ್ ಅಳವಡಿಸುವಂತಿಲ್ಲ ಎಂಬ ಸರ್ವೋಚ್ಛ ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಈ ರಸ್ತೆಯಲ್ಲಿ ಹಂಪ್ ಅಥವಾ ವೇಗ ನಿಯಂತ್ರಕ ಅಳವಡಿಸಿಲ್ಲ. ಇದರಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ದೂರಲಾಯಿತು.
    ಈ ರಸ್ತೆಯಲ್ಲಿ ಶಾಲಾ-ಕಾಲೇಜುಗಳು, ಚರ್ಚ್‌ಗಳು, ಪೊಲೀಸ್ ಠಾಣೆ, ಮೆಸ್ಕಾಂ ಸೇರಿದಂತೆ ಸರ್ಕಾರಿ ಕಛೇರಿಗಳು ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯಗೊಳ್ಳುವವರೆಗೂ ಈ ರಸ್ತೆಯ ಪ್ರಮುಖ ಸ್ಥಳಗಳಲ್ಲಿ, ವೃತ್ತಗಳಲ್ಲಿ ತಾತ್ಕಾಲಿಕವಾಗಿ ಹಂಪ್ ಅಥವಾ ವೇಗ ನಿಯಂತ್ರಕ ಅಳವಡಿಸುವಂತೆ ಆಗ್ರಹಿಸಲಾಯಿತು.
    ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ವಾಲ್ಯನಾಯ್ಕ, ಕರುನಾಡು ಹಿತ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್ ಪಾಲ್ಗೊಂಡಿದ್ದರು.

No comments:

Post a Comment