Tuesday, March 22, 2022

ಮಾ.೨೩ ಜನಸಂಪರ್ಕ, ಅಹವಾಲು ಸ್ವೀಕಾರ ಸಭೆ

    ಭದ್ರಾವತಿ, ಮಾ. ೨೨: ತಾಲೂಕು ಕಛೇರಿ ಸಭಾಂಗಣದಲ್ಲಿ ಮಾ.೨೩ರಂದು ಮಧ್ಯಾಹ್ನ ೧೨ ಗಂಟೆಗೆ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಜನಸಂಪರ್ಕ ಮತ್ತು ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದೆ.
    ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕರು ಅಧ್ಯಕ್ಷತೆ ವಹಿಸಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.

No comments:

Post a Comment