ಭದ್ರಾವತಿ, ಮಾ. ೧೭: ಹಳೇನಗರದ ವಿವಿಧೆಡೆ ಹೋಳಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಕಂಡು ಬರುತ್ತಿದ್ದು, ಶನಿವಾರ ಹೋಳಿ ಆಚರಣೆ ಹಾಗು ರತಿ ಮನ್ಮಥರ ದಹನದೊಂದಿಗೆ ಹಬ್ಬ ಕೊನೆಗೊಳ್ಳಲಿದೆ.
ಭೂತನಗುಡಿಯಲ್ಲಿ ಶ್ರೀ ನೇತಾಜಿ ಸೇವಾ ಸಮಿತಿ ಮತ್ತು ಶ್ರೀ ನೇತಾಜಿ ಯುವಕರ ಸಂಘದ ವತಿಯಿಂದ ಶ್ರೀ ಕೃಷ್ಣ ರುಕ್ಮಿಣಿ ದೇವಸ್ಥಾನದ ಮುಂಭಾಗ ಹಾಗು ಹಳೇನಗರದ ಕುಂಬಾರರ ಬೀದಿ ಮತ್ತು ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ರತಿ ಮನ್ಮಥರ ಪ್ರತಿಷ್ಠಾಪನೆಯೊಂದಿಗೆ ಕಳೆದ ೬ ದಿನಗಳಿಂದ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ.
ಹೋಳಿ ಆಚರಣೆ ಪ್ರಮುಖ ಆಕರ್ಷಣೆಯಾಗಿದ್ದು, ವಯಸ್ಸಿನ ಮಿತಿ ಇಲ್ಲದೆ ಮಕ್ಕಳು, ಮಹಿಳೆಯರು, ಪುರುಷರು ಒಂದೆಡೆ ಸೇರಿ ಸಂಭ್ರಮಿಸುವುದು ವಿಶೇಷವಾಗಿದೆ.
ಭದ್ರಾವತಿ ಭೂತನಗುಡಿಯಲ್ಲಿ ಶ್ರೀ ನೇತಾಜಿ ಸೇವಾ ಸಮಿತಿ ಮತ್ತು ಶ್ರೀ ನೇತಾಜಿ ಯುವಕರ ಸಂಘದ ವತಿಯಿಂದ ಶ್ರೀ ಕೃಷ್ಣ ರುಕ್ಮಿಣಿ ದೇವಸ್ಥಾನದ ಮುಂಭಾಗ ಹಾಗು ಹಳೇನಗರದ ಕುಂಬಾರರ ಬೀದಿ ಮತ್ತು ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ಹೋಳಿ ಹಬ್ಬದ ಹಿನ್ನಲೆಯಲ್ಲಿ ರತಿ ಮನ್ಮಥರನ್ನು ಪ್ರತಿಷ್ಠಾಪಿಸಿರುವುದು.
No comments:
Post a Comment