ಎಂ.ಎಸ್ ಈಶ್ವರಯ್ಯ
ಭದ್ರಾವತಿ, ಮಾ. ೨೯: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ಹಾಗು ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಎಂ.ಎಸ್ ಈಶ್ವರಯ್ಯನವರ ಸ್ಮರಣೆ, ೬೨೬ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮ ಮಾ.೩೦ರಂದು ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಶರಣ ಸಾಹಿತ್ಯಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರುಪಾಕ್ಷಪ್ಪ, ಅಧ್ಯಕ್ಷತೆ ವಹಿಸಲಿದ್ದು, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್, ತಾಲೂಕು ಗೌರವಾಧ್ಯಕ್ಷ ಬಸವನಗೌಡ ಮಾಳಗಿ, ಕದಳಿ ಮಹಿಳಾ ವೇದಿಕೆ ಸಂಚಾಲಕಿ ಹೇಮಾವತಿ ಚಿಗಟೇರಪ್ಪ ಮತ್ತು ತರೀಕೆರೆ ರಸ್ತೆಯ ಬಸವಕೇಂದ್ರದ ಅಧ್ಯಕ್ಷ ಜಗದೀಶ್ ಕವಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment