ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ಭದ್ರಾವತಿ ತಾಲೂಕಿನ ಹೊಸ ಕೋಡಿಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಭದ್ರಾವತಿ, ಮಾ. ೪: ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ತಾಲೂಕಿನ ಹೊಸ ಕೋಡಿಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಹೊಸ ಕೋಡಿಹಳ್ಳಿ ಗ್ರಾಮದ ವಿ. ಕೃಷ್ಣಪ್ಪ ಎಂಬುವವರಿಗೆ ಸೇರಿದಂತೆ ಆಲೆಮನೆಯ ಶೆಡ್ನಲ್ಲಿ ಕಬ್ಬಿನ ಚರಟ ಮತ್ತು ತೆಂಗಿನ ಕಾಯಿ ಸಿಪ್ಪೆ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಸುಮಾರು ೨ ಲಕ್ಷ ರು. ನಷ್ಟ ಉಂಟಾಗಿದೆ ಅಂದಾಜಿಸಲಾಗಿದೆ. ಮಾಹಿತಿ ತಿಳಿದ ತಕ್ಷಣ ನಗರದ ಅಗ್ನಿಶಾಮಕ ಠಾಣೆಯ ಎನ್. ವಸಂತಕುಮಾರ್ ಮತ್ತು ಶಿವಮೊಗ್ಗ ಅಗ್ನಿ ಶಾಮಕ ಠಾಣೆಯ ಕೆ.ಎನ್ ಪ್ರವೀಣ್ ನೇತೃತ್ವದ ತಂಡ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
No comments:
Post a Comment