Thursday, March 24, 2022

ಶ್ರೀ ರಾಮರಾಜ್ಯ ಸಂಘದಿಂದ ‘ಅಪ್ಪು ನಮನ’

ಚಲನಚಿತ್ರ ನಟ, ಸಮಾಜ ಸೇವಕ ದಿವಂಗತ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಹುಟ್ಟುಹಬ್ಬ 'ಅಪ್ಪು ನಮನ' ಕಾರ್ಯಕ್ರಮ ಭದ್ರಾವತಿ ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಜನ್ನಾಪುರ ಶ್ರೀ ರಾಮರಾಜ್ಯ ಸಂಘದ ವತಿಯಿಂದ ಆಚರಿಸಲಾಯಿತು.
    ಭದ್ರಾವತಿ, ಮಾ. ೨೪: ಚಲನಚಿತ್ರ ನಟ, ಸಮಾಜ ಸೇವಕ ದಿವಂಗತ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಹುಟ್ಟುಹಬ್ಬ 'ಅಪ್ಪು ನಮನ' ಕಾರ್ಯಕ್ರಮ ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಜನ್ನಾಪುರ ಶ್ರೀ ರಾಮರಾಜ್ಯ ಸಂಘದ ವತಿಯಿಂದ ಆಚರಿಸಲಾಯಿತು.
    ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು. ಪುನೀತ್‌ರಾಜ್‌ಕುಮಾರ್‌ರವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಹಾಗು ಅವರು ಕೈಗೊಂಡಿರುವ ಸಾಮಾಜಿಕ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು.
    ನಗರಸಭಾ ಸದಸ್ಯರಾದ ಸವಿತಾ, ನಾಗರತ್ನ, ನಗರಸಭೆ ಮಾಜಿ ಸದಸ್ಯ ಎಂ. ರಾಜು, ಮುಖಂಡರಾದ ಉಮೇಶ್ ಸೇರಿದಂತೆ ಸ್ಥಳೀಯ ಮುಖಂಡರು ಮುಖಂಡರು. ಜನ್ನಾಪುರ, ಗಣೇಶ್ ಕಾಲೋನಿ, ಹುತ್ತಾಕಾಲೋನಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು, ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

No comments:

Post a Comment