ಭದ್ರಾವತಿಯಲ್ಲಿ ಶುಕ್ರವಾರ ಸಂಭ್ರಮದ ಹೋಳಿ ಆಚರಣೆಯೊಂದಿಗೆ ಪ್ರಮುಖ ರಸ್ತೆಗಳಲ್ಲಿ ಮನ್ಮಥ ದೇವರ ಮೆರವಣಿಗೆ ನಡೆಸಿ ಕೊನೆಯಲ್ಲಿ ದಹಿಸುವ ಮೂಲಕ ಹಬ್ಬಕ್ಕೆ ತೆರೆ ಎಳೆಯಲಾಯಿತು.
ಭದ್ರಾವತಿ, ಮಾ. ೧೮: ನಗರದಲ್ಲಿ ಶುಕ್ರವಾರ ಸಂಭ್ರಮದ ಹೋಳಿ ಆಚರಣೆಯೊಂದಿಗೆ ಪ್ರಮುಖ ರಸ್ತೆಗಳಲ್ಲಿ ಮನ್ಮಥ ದೇವರ ಮೆರವಣಿಗೆ ನಡೆಸಿ ಕೊನೆಯಲ್ಲಿ ದಹಿಸುವ ಮೂಲಕ ಹಬ್ಬಕ್ಕೆ ತೆರೆ ಎಳೆಯಲಾಯಿತು.
ಭೂತನಗುಡಿಯಲ್ಲಿ ಶ್ರೀ ನೇತಾಜಿ ಸೇವಾ ಸಮಿತಿ ಮತ್ತು ಶ್ರೀ ನೇತಾಜಿ ಯುವಕರ ಸಂಘದ ವತಿಯಿಂದ ಶ್ರೀ ಕೃಷ್ಣ ರುಕ್ಮಿಣಿ ದೇವಸ್ಥಾನದ ಮುಂಭಾಗ ಪ್ರತಿಷ್ಠಾಪಿಸಲಾಗಿದ್ದ ಮನ್ಮಥ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಜೊತೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಬಣ್ಣ ಬಣ್ಣದ ರಂಗಿನಾಟದೊಡನೆ ಮಕ್ಕಳು, ಮಹಿಳೆಯರು, ಪುರುಷರು ಸಂಭ್ರಮಿಸುವ ಮೂಲಕ ಹೋಳಿ ಹಬ್ಬದ ಮಹತ್ವ ಸಾರಿದರು. ಕೊನೆಯಲ್ಲಿ ಧಾರ್ಮಿಕ ಆಚರಣೆಗಳೊಂದಿಗೆ ಮನ್ಮಥ ದೇವರನ್ನು ದಹಿಸಲಾಯಿತು.
No comments:
Post a Comment