ಅಗಮುಡಿ ಸಮುದಾಯ ಭವನ
ಭದ್ರಾವತಿ, ಮಾ. ೫: ಗಾಂಧಿನಗರದ ಅಗಮುಡಿ ಮೊದಲಿಯರ್ ಸಂಘದ ೨೫ನೇ ವರ್ಷದ ರಜತ ಮಹೋತ್ಸವ ಹಾಗು ಅಗಮುಡಿ ಸಮುದಾಯ ಭವನದ ಲೋಕಾರ್ಪಣೆ ಮಾ.೬ರ ಭಾನುವಾರ ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಮುದಾಯ ಭವನ ಉದ್ಘಾಟಿಸಲಿದ್ದು, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಬೆಂಗಳೂರಿನ ಐಎಂಪಿಎ ಸಂಸ್ಥಾಪಕ ಡಾ.ಆರ್ ಅರುಣಾಚಲಂ, ಶ್ರೀ ಭದ್ರಗಿರಿ ದೇವಸ್ಥಾನ ಟ್ರಸ್ಟ್ ಕಾರ್ಯದರ್ಶಿ ಚಂದ್ರಘೋಷನ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಂಘದ ಅಧ್ಯಕ್ಷ ಕಣ್ಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
No comments:
Post a Comment