ಭದ್ರಾವತಿ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಲತಾ ಗಣೇಶ್ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಪಕ್ಷದ ಪ್ರಮುಖರು, ಕಾರ್ಯಕರ್ತರು ನೂತನ ಉಪಾಧ್ಯಕ್ಷೆಯನ್ನು ಅಭಿನಂಸಿದರು.
ಭದ್ರಾವತಿ, ಮಾ. ೧೧: ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಲತಾ ಗಣೇಶ್ ಅವಿರೋಧವಾಗಿ ಆಯ್ಕೆಯಾದರು.
ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನ ಅನಿವಾರ್ಯ ಕಾರಣಗಳಿಂದ ತೆರವಾಗಿದ್ದು, ಈ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಲತಾ ಗಣೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಪಕ್ಷದ ಮುಖಂಡರಾದ ಎಸ್. ಕುಮಾರ್, ಮಂಗೋಟೆ ರುದ್ರೇಶ್, ಗಣೇಶ್ರಾವ್, ನಕುಲ್ ಜೆ. ರೇವಣಕರ್, ಗೋಕುಲ್ ಕೃಷ್ಣ, ಚಿಕ್ಕಗೊಪ್ಪೇನಹಳ್ಳಿ ಪ್ರದೀಪ್, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗು ಕಾರ್ಯಕರ್ತರು ನೂತನ ಉಪಾಧ್ಯಕ್ಷೆಯನ್ನು ಅಭಿನಂದಿಸಿದ್ದಾರೆ
೨೦೨೦ ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಒಟ್ಟು ೩೫ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲಾಗಿತ್ತು. ೨೦೨೧ ಜನವರಿ ತಿಂಗಳಿನಲ್ಲಿ ಜಿಲ್ಲಾಧಿಕಾರಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಹೊರಡಿಸಿ ಆದೇಶ ಹೊರಡಿಸಿದ್ದರು. ಈ ಹಿನ್ನಲೆಯಲ್ಲಿ ಫೆಬ್ರವತಿ ತಿಂಗಳಿನಲ್ಲಿ ಬಹುತೇಕ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲಾಗಿತ್ತು. ಪ್ರಮುಖ ರಾಜಕೀಯ ಪಕ್ಷಗಳು ತೆರೆಮರೆಯಲ್ಲಿ ಒಪ್ಪಂದದಂತೆ ಅಧಿಕಾರ ಹಂಚಿಕೆ ಮಾಡಿಕೊಂಡಿವೆ.
No comments:
Post a Comment