Thursday, March 10, 2022

ಪಂಜಾಬ್‌ನಲ್ಲಿ ಎಎಪಿ ಗೆಲುವು : ವಿಜಯೋತ್ಸವ

ದೇಶದ ಎಲ್ಲಾ ರಾಜ್ಯಗಳಲ್ಲೂ ಪಕ್ಷ ಮುಂಚೂಣಿಗೆ ಬರುವ ವಿಶ್ವಾಸ

ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪಂಜಾಬ್‌ನಲ್ಲಿ ಹೆಚ್ಚಿನ ಸ್ಥಾನಗಳೊಂದಿಗೆ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಗುರುವಾರ ಪಕ್ಷದ ಮುಖಂಡರು ಭದ್ರಾವತಿ ರಂಗಪ್ಪ ವೃತ್ತದಲ್ಲಿ ಮಾಸ್ಕ್ ಜೊತೆಗೆ ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಲಾಯಿತು.
    ಭದ್ರಾವತಿ, ಮಾ. ೧೦: ಕೇಂದ್ರಾಡಳಿ ಪ್ರದೇಶವಾಗಿರುವ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರ ಮಾಡಿರುವ ಸಾಧನೆಯ ಹಿನ್ನಲೆಯಲ್ಲಿ ಪಂಜಾಬ್ ಮತದಾರರು ಪಕ್ಷವನ್ನು ಬೆಂಬಲಿಸಿದ್ದು, ಪಂಜಾಬ್‌ನಲ್ಲೂ ಉತ್ತಮ ಆಡಳಿತ ನೀಡಲಿದೆ. ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಪಕ್ಷ ಮುಂಚೂಣಿಗೆ ಬರುವ ವಿಶ್ವಾಸವಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡರು ಹೇಳಿದರು.
    ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪಂಜಾಬ್‌ನಲ್ಲಿ ಹೆಚ್ಚಿನ ಸ್ಥಾನಗಳೊಂದಿಗೆ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಗುರುವಾರ ಪಕ್ಷದ ಮುಖಂಡರು ನಗರದ ರಂಗಪ್ಪ ವೃತ್ತದಲ್ಲಿ ಮಾಸ್ಕ್ ಜೊತೆಗೆ ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿ ಮಾತನಾಡಿದರು.
    ದೆಹಲಿ ಸರ್ಕಾರ ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಗಣನೀಯವಾದ ಸಾಧನೆ ಮಾಡಿದೆ. ಹಲವಾರು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಕೇಜ್ರಿವಾಲ್‌ರವರ ದೂರದೃಷ್ಟಿ ಆಡಳಿತ ದೇಶಕ್ಕೆ ಅಗತ್ಯವಿದ್ದು, ಪ್ರಾಮಾಣಿಕ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಗುರಿಯೊಂದಿಗೆ ಮುಂದಿನ ದಿನಗಳಲ್ಲಿ ದೇಶಾದ್ಯಂತ ಪ್ರಬಲವಾಗಿ ವ್ಯಾಪಿಸುವ ವಿಶ್ವಾಸವಿದೆ ಎಂದರು.
    ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ನೇತೃತ್ವದಲ್ಲಿ ನಡೆದ ವಿಯೋತ್ಸವದಲ್ಲಿ ಪ್ರಮುಖರಾದ  ಡಿ.ಎಂ ಚಂದ್ರಪ್ಪ, ಪರಮೇಶ್ವರಚಾರ್, ರಮೇಶ್, ಅಬ್ದುಲ್ ಖದೀರ್, ಇಬ್ರಾಹಿಂ ಖಾನ್, ಎ. ಮಸ್ತಾನ್, ರೇಷ್ಮಾಬಾನು, ಜಾವಿದ್, ಪರಮೇಶ್ವರನಾಯ್ಕ್, ಬಸವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  


No comments:

Post a Comment