ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 626ನೇ ವಚನ ಮಂಟಪ ಮತ್ತು ದತ್ತಿ ಹಾಗು ಎಂ.ಎಸ್ ಈಶ್ವರಯ್ಯನವರ ಸ್ಮರಣೆ ಕಾರ್ಯಕ್ರಮದಲ್ಲಿ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್ ಮಾತನಾಡಿದರು.
ಭದ್ರಾವತಿ, ಮಾ. ೩೦: ಪ್ರತಿಯೊಬ್ಬರ ಬದುಕು ಸಾರ್ಥಕಗೊಳ್ಳಬೇಕು. ನಾವುಗಳು ಕೈಗೊಳ್ಳುವ ಕಾರ್ಯಗಳು ಇದಕ್ಕೆ ಪೂರಕವಾಗಿರಬೇಕು. ವಚನಗಳು ಈ ನಿಟ್ಟಿನಲ್ಲಿ ಸಹಕಾರಿಯಾಗಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್ ಹೇಳಿದರು.
ಅವರು ಬುಧವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 626ನೇ ವಚನ ಮಂಟಪ ಮತ್ತು ದತ್ತಿ ಹಾಗು ಎಂ.ಎಸ್ ಈಶ್ವರಯ್ಯನವರ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಾವು ಬದುಕಿರುವಾಗ ಮಾಡುವ ಕಾರ್ಯಗಳು ನಮ್ಮನ್ನು ಜೀವಂತವಾಗಿ ಉಳಿಸುತ್ತವೆ. ಈಶ್ವರಯ್ಯನವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನಮ್ಮೆಲ್ಲರ ಸ್ಮರಣೆಯಲ್ಲಿ ಉಳಿದುಕೊಂಡಿದ್ದಾರೆ. ಶರಣ ಸಾಹಿತ್ಯ ಪರಿಷತ್ ಬದುಕಿನ ಸಾರ್ಥಕತೆಯನ್ನು ಸಾರುವ ನಿಟ್ಟಿನಲ್ಲಿ ಹಾಗು ಶರಣರ ವಿಚಾರಧಾರೆಗಳನ್ನು ಸಮಾಜಕ್ಕೆ ತಿಳಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದೆ. ಜಿಲ್ಲೆಯಲ್ಲಿ ಪರಿಷತ್ ಕಾರ್ಯ ಚಟುವಟಿಕೆಗಳು ನಿರಂತರವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರಿಯಾಶೀಲತೆಯೊಂದಿಗೆ ಪರಿಷತ್ ಮುನ್ನಡೆಯಲು ಎಲ್ಲರ ಸಹಕಾರ ಅಗತ್ಯವಿದೆ ಎಂದರು.
ಪರಿಷತ್ ತಾಲೂಕು ಗೌರವಾಧ್ಯಕ್ಷ ಬಸವನಗೌಡ ಮಾಳಗಿ, ಬಸವಕೇಂದ್ರ ಅಧ್ಯಕ್ಷ ಜಗದೀಶ್ ಕವಿ, ಕದಳಿ ಮಹಿಳಾ ವೇದಿಕೆ ಸಂಚಾಲಕಿ ಹೇಮಾವತಿ ಚಿಗಟೇರಪ್ಪ ಮಾತನಾಡಿದರು.
ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ಪರಿಷತ್ ಪ್ರಮುಖರು, ಕದಳಿ ಮಹಿಳಾ ವೇದಿಕೆ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment