ಶ್ರೀ ಬಸವಣ್ಣ ಸ್ವಾಮಿ
ಭದ್ರಾವತಿ, ಮಾ. ೧೩: ತಾಲೂಕಿನ ನವಲೆ ಬಸವಾಪುರ ಗ್ರಾಮದಲ್ಲಿ ನಡೆಯಲಿರುವ ಶ್ರೀ ಕ್ಷೇತ್ರದ ಶ್ರೀ ಬಸವಣ್ಣ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೧೪ರಂದು ಸಂಜೆ ೫ ಗಂಟೆಗೆ ಶ್ರೀ ಬಿಳಿಕಿ ಹಿರೇಮಠದಲ್ಲಿ ಧಾರ್ಮಿಕ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಆಚರಣೆಗಳು ನಡೆಯಲಿದ್ದು, ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು, ಭಕ್ತಾಧಿಗಳು ಪಾಲ್ಗೊಳ್ಳುವಂತೆ ಕೋರಲಾಗಿದೆ.
ಮಾ.೧೬ರಂದು ರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಳಾರತಿ:
ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಅಂಗವಾಗಿ ಶಿವಮೊಗ್ಗ ಬಿದರೆ ಗ್ರಾಮದಲ್ಲಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಮಾ.೧೬ರ ಬೆಳಿಗ್ಗೆ ರೇಣುಕಾಚಾರ್ಯ ಮೂರ್ತಿಗೆ ರುದ್ರಾಭಿಷೇಕ ಅಷ್ಟೋತ್ತರ, ಮಹಾಮಂಗಳಾರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ ೧೨.೩೦ಕ್ಕೆ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment