Friday, March 11, 2022

ತಂಬಾಕು ಉತ್ಪನ್ನಗಳ ಮಾರಾಟ : ಅರಳಿಹಳ್ಳಿ ಗ್ರಾಮದಲ್ಲಿ ದಾಳಿ


ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಶಿವಮೊಗ್ಗ ಜಿಲ್ಲಾ ತಂಬಾಕು ಕೋಶ ವತಿಯಿಂದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟು ಮೇಲೆ ಕೋಟ್ಪಾ ಕಾಯ್ದೆಯಡಿ ದಾಳಿ ನಡೆಸಿ ದಂಡ ವಿಧಿಸಿರುವ ಘಟನೆ ಶುಕ್ರವಾರ ನಡೆಯಿತು.
    ಭದ್ರಾವತಿ, ಮಾ. ೧೧: ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಶಿವಮೊಗ್ಗ ಜಿಲ್ಲಾ ತಂಬಾಕು ಕೋಶ ವತಿಯಿಂದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟು ಮೇಲೆ ಕೋಟ್ಪಾ ಕಾಯ್ದೆಯಡಿ ದಾಳಿ ನಡೆಸಿ ದಂಡ ವಿಧಿಸಿರುವ ಘಟನೆ ಶುಕ್ರವಾರ ನಡೆದಿದೆ.
    ಒಟ್ಟು ೧೫೦೦ ರು. ದಂಡ ವಿಧಿಸಲಾಗಿದ್ದು, ಕಾರ್ಯಾಚರಣೆಯಲ್ಲಿ  ಶಿವಮೊಗ್ಗ ಜಿಲ್ಲಾ ತಂಬಾಕು ಕೋಶದ ಹೇಮಂತ್ ರಾಜ್, ರವಿರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದಮೂರ್ತಿ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹರೀಶ್, ಆಕಾಶ್, ಅಲ್ಲಾವುದ್ದೀನ್ ತಾಜ್ ಹಾಗು ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


No comments:

Post a Comment