Wednesday, March 30, 2022

ಶಿಶುಪಾಲನ ಕೇಂದ್ರದಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿರುವ ಶಿಶು ಪಾಲನ ಕೇಂದ್ರದಲ್ಲಿ ಬುಧವಾರ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಶಿಬಿರ ಉದ್ದೇಶಿಸಿ ಮಾತನಾಡಿದರು.
    ಭದ್ರಾವತಿ, ಮಾ. ೩೦: ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿರುವ ಶಿಶು ಪಾಲನ ಕೇಂದ್ರದಲ್ಲಿ ಬುಧವಾರ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
    ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಹಾಗು ಉಜ್ಜನಿಪುರದಲ್ಲಿ ಶಿಶು ಪಾಲನ ಕೇಂದ್ರಗಳನ್ನು ತೆರೆಯಲಾಗಿದ್ದು, ದಿನದ ಕೂಲಿ ನಂಬಿ ಬದುಕುತ್ತಿರುವ ದಂಪತಿಗಳಿಗೆ ಈ ಕೇಂದ್ರಗಳು ಹೆಚ್ಚಿನ ಸಹಕಾರಿಯಾಗಿವೆ.
    ಶಿವಮೊಗ್ಗ ಗುತ್ತಿ ಮಲ್ನಾಡ್ ಹಾಸ್ಪಿಟಲ್ ತಜ್ಞ ವೈದ್ಯರ ತಂಡ ತಪಾಸಣೆ ನಡೆಸಿತು. ಕಾರ್ಮಿಕ ಇಲಾಖೆ ನಿರೀಕ್ಷಕಿ ಮುಮ್ತಾಜ್ ಬೇಗಂ, ನಗರಸಭೆ ಸದಸ್ಯೆ ಸವಿತ, ಮುಖಂಡ ಉಮೇಶ್ ಸೇರಿದಂತೆ ಇನ್ನಿತರರು ಶಿಬಿರಕ್ಕೆ ಚಾಲನೆ ನೀಡಿದರು.

No comments:

Post a Comment