ಕರ್ನಾಟಕ ರಾಜ್ಯ ಕರಾಟೆ ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಭದ್ರಾವತಿ ಹಳೇನಗರದ ಕನಕ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಎಂ. ಶ್ರೇಯಸ್ ಭಾಗವಹಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ.
ಭದ್ರಾವತಿ, ಮಾ. ೭: ಕರ್ನಾಟಕ ರಾಜ್ಯ ಕರಾಟೆ ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಹಳೇನಗರದ ಕನಕ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಎಂ. ಶ್ರೇಯಸ್ ಭಾಗವಹಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ.
ಶ್ರೇಯಸ್ ೧೨ ಕೆ.ಜಿ ವಿಭಾಗದಲ್ಲಿ ತೃತೀಯ ಬಹುಮಾನ ಪಡೆದುಕೊಂಡು ಕೀರ್ತಿ ತಂದಿದ್ದಾನೆ. ಈ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲ ಸಿ.ಡಿ ಮಂಜುನಾಥ್ ಹಾಗು ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
No comments:
Post a Comment