ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಶ್ರೀ ಹರಿಹರೇಶ್ವರ ಪ್ರೌಢಶಾಲೆಯ ೧೯೯೨-೯೩ನೇ ಸಾಲಿನ ಹಳೇಯ ವಿದ್ಯಾರ್ಥಿಗಳು ಶನಿವಾರ ಒಂದೆಡೆ ಸೇರಿ ಸಂಭ್ರಮಿಸುವ ಜೊತೆಗೆ ತಮಗೆ ವಿದ್ಯೆ ಕಲಿಸಿಕೊಟ್ಟ ಗುರುಗಳಿಗೆ ಗುರುವಂದನೆ ಸಲ್ಲಿಸುವ ಮೂಲಕ ಸಾರ್ಥಕತೆ ಕಂಡುಕೊಂಡರು.
ಭದ್ರಾವತಿ, ಮಾ. ೧೨: ತಾಲೂಕಿನ ಕೂಡ್ಲಿಗೆರೆ ಶ್ರೀ ಹರಿಹರೇಶ್ವರ ಪ್ರೌಢಶಾಲೆಯ ೧೯೯೨-೯೩ನೇ ಸಾಲಿನ ಹಳೇಯ ವಿದ್ಯಾರ್ಥಿಗಳು ಶನಿವಾರ ಒಂದೆಡೆ ಸೇರಿ ಸಂಭ್ರಮಿಸುವ ಜೊತೆಗೆ ತಮಗೆ ವಿದ್ಯೆ ಕಲಿಸಿಕೊಟ್ಟ ಗುರುಗಳಿಗೆ ಗುರುವಂದನೆ ಸಲ್ಲಿಸುವ ಮೂಲಕ ಸಾರ್ಥಕತೆ ಕಂಡುಕೊಂಡರು.
ಸ್ನೇಹ ಸಮ್ಮಿಲನ ಪ್ರೇರಣ ಹೆಸರಿನಲ್ಲಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹಳೇಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನದ ನೆನಪುಗಳೊಂದಿಗೆ ಅನಿಸಿಕೆಗಳನ್ನು ಹಂಚಿಕೊಂಡರು. ಅಲ್ಲದೆ ಮುಂದಿನ ದಿನಗಳಲ್ಲಿ ತಾವು ವಿದ್ಯೆ ಕಲಿತಿರುವ ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಶಾಲೆಯನ್ನು ದತ್ತು ಪಡೆಯುವ ನಿರ್ಧಾರ ಕೈಗೊಂಡರು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಗುರುಗಳಾದ ಹರಿಬಾಬು, ದೇವೇಂದ್ರಪ್ಪ, ಶ್ರೀಧರಸ್ವಾಮಿ, ಶ್ರೀ ವಿನಾಯಕ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎ. ಧರ್ಮೇಂದ್ರ, ಹಾಲಪ್ಪ, ಕೃಷ್ಣಮೂರ್ತಿ ಸೇರಿದಂತೆ ಆಂಧ್ರ ಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸುಮಾರು ೪೦ಕ್ಕೂ ಹೆಚ್ಚು ಹಳೇಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
No comments:
Post a Comment