Saturday, March 26, 2022

ಆಂಜನಪ್ಪ ನಿಧನ

ಆಂಜನಪ್ಪ 
    ಭದ್ರಾವತಿ, ಮಾ. ೨೬: ತಾಲೂಕು ಸರ್ಕಾರಿ ‘ಡಿ’ ಗ್ರೂಪ್ ನೌಕರರ ಸಂಘದ ಉಪಾಧ್ಯಕ್ಷ ಆಂಜನಮೂರ್ತಿಯವರ ತಂದೆ, ಸಂಜಯ್ ಕಾಲೋನಿ ನಿವಾಸಿ ಆಂಜನಪ್ಪ(೮೩) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. 
ಆಂಜನಮೂರ್ತಿ ಸೇರಿದಂತೆ ೪ ಗಂಡು, ೧ ಹೆಣ್ಣು ಮಕ್ಕಳನ್ನು ಹೊಂದಿದ್ದರು. ಆಂಜನಪ್ಪ ಕೆಲವು ದಿನಗಳಿಂದ ಆನಾರೋಗ್ಯಕ್ಕೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 
ಇವರ ಅಂತ್ಯಕ್ರಿಯೆ ಭಾನುವಾರ ಹುತ್ತಾಕಾಲೋನಿಯಲ್ಲಿರುವ ಹಿಂದು ರುದ್ರ ಭೂಮಿಯಲ್ಲಿ ನಡೆಯಲಿದೆ. ಮೃತರ ನಿಧನಕ್ಕೆ ‘ಡಿ’ ಗ್ರೂಪ್ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. 

No comments:

Post a Comment