ಭದ್ರಾವತಿ ಹಳೇನಗರದ ವಿವಿಧೆಡೆ ಶನಿವಾರ ಹೋಳಿ ಸಂಭ್ರಮಾಚರಣೆ ನಡೆಸಿ ರತಿ ಮನ್ಮಥರ ದಹನದೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು.
ಭದ್ರಾವತಿ, ಮಾ. ೧೯: ಹಳೇನಗರದ ವಿವಿಧೆಡೆ ಶನಿವಾರ ಹೋಳಿ ಸಂಭ್ರಮಾಚರಣೆ ನಡೆಸಿ ರತಿ ಮನ್ಮಥರ ದಹನದೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು.
ಭೂತನಗುಡಿ ಭಾಗದಲ್ಲಿ ಶುಕ್ರವಾರ ಹೋಳಿ ಹಬ್ಬಕ್ಕೆ ತೆರೆ ಎಳೆಯಲಾಗಿತ್ತು. ಆದರೆ ಹಳೇನಗರ ಭಾಗದ ಕುಂಬಾರರ ಬೀದಿ, ಉಪ್ಪಾರರ ಬೀದಿ ಮತ್ತು ಬ್ರಾಹ್ಮಣ ಬೀದಿಗಳಲ್ಲಿ ಒಂದು ದಿನ ತಡವಾಗಿ ಹಬ್ಬಕ್ಕೆ ತೆರೆಯಲಾಯಿತು.
ಪ್ರಮುಖ ರಸ್ತೆಗಳಲ್ಲಿ ಬಣ್ಣ ಬಣ್ಣದ ರಂಗಿನಾಟದೊಡನೆ ವಯಸ್ಸಿನ ಬೇಧಭಾವವಿಲ್ಲದೆ ಮಕ್ಕಳು, ಮಹಿಳೆಯರು ಮತ್ತು ಪುರುಷರು ಒಂದೆಡೆ ಸೇರಿ ಸಂಭ್ರಮಿಸಿದರು. ನಂತರ ಧಾರ್ಮಿಕ ಆಚರಣೆಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ರತಿಮನ್ಮಥರ ಮೆರವಣಿಗೆ ನಡೆಸಿ ದಹನದೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು. ಈ ಭಾಗದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
No comments:
Post a Comment