Thursday, March 10, 2022

೪ ರಾಜ್ಯಗಳಲ್ಲಿ ಬಿಜೆಪಿ ಗೆಲುವು : ವಿಜಯೋತ್ಸವ

ಉತ್ತರ ಪ್ರದೇಶ ಸೇರಿದಂತೆ ೫ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ೪ ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಗುರುವಾರ ಭದ್ರಾವತಿ ರಂಗಪ್ಪ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
    ಭದ್ರಾವತಿ, ಮಾ. ೧೦: ಉತ್ತರ ಪ್ರದೇಶ ಸೇರಿದಂತೆ ೫ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ೪ ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಗುರುವಾರ ನಗರದ ರಂಗಪ್ಪ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
    ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಕ್ಷದ ಘೋಷಣೆಗಳನ್ನು ಹಾಕಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ದೇಶದ ಜನರು ಬೆಂಬಲಿಸಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಇನ್ನೂ ಹೆಚ್ಚಿನ ಬೆಂಬಲ ಲಭಿಸಲಿದೆ ಎಂದರು.
    ಪ್ರಮುಖರಾದ ಎನ್. ವಿಶ್ವನಾಥರಾವ್, ಮಹಿಳಾ ಘಟಕದ ಅಧ್ಯಕ್ಷ ಶೋಭಾ ಪಾಟೀಲ್, ಮಂಡಲ ನಗರ ಕಾರ್ಯದರ್ಶಿ ಚನ್ನೇಶ್, ಬಿಜೆಪಿ ಯುವ ಘಟಕದ ಅಧ್ಯಕ್ಷ ವಿಜಯ್, ಆರ್. ಶೋಭಾ, ಶಶಿಕಲಾ, ರಾಮನಾಥ್ ಬರ್ಗೆ, ಸುಲೋಚನಾ ಪ್ರಕಾಶ್, ಬಿ.ಎಸ್ ನಾರಾಯಣಪ್ಪ, ಧನುಷ್ ಬೋಸ್ಲೆ, ಸತೀಶ್‌ಕುಮಾರ್, ಜೆ. ಮೂರ್ತಿ, ಕವಿತಾ ಸುರೇಶ್, ನಕುಲ್, ನಾಗಮಣಿ, ಗೋಕುಲ್ ಕೃಷ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


No comments:

Post a Comment