Saturday, March 19, 2022

ಬಿಜೆಪಿಯಿಂದ ದುರ್ಬಳಕೆ : ಪರಿಶಿಷ್ಟ ಜಾತಿಗೆ ಸೇರಿದ ಹನುಮಂತನಾಯ್ಕರಿಗೆ ಅನ್ಯಾಯ

ಹನುಮಂತನಾಯ್ಕ
    ಭದ್ರಾವತಿ, ಮಾ. ೧೯: ಭಾರತೀಯ ಜನತಾ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಜೊತೆಗೆ ಹಂತ ಹಂತವಾಗಿ ಗುರುತಿಸಿಕೊಂಡು ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಹನುಮಂತನಾಯ್ಕ ವಿರುದ್ಧ ಪಕ್ಷದ ಕೆಲವರು ಷಡ್ಯಂತ್ರ ನಡೆಸಿ ಬಲಿಪಶು ಮಾಡಲಾಗಿದೆ ಎಂದು ತಾಲೂಕು ಬಂಜಾರ ಸಮಾಜದ ಪ್ರಮುಖರು ಆರೋಪಿಸಿದ್ದಾರೆ.
    ಮಂಡಲ ಅಧ್ಯಕ್ಷ ಎಂ. ಪ್ರಭಾಕರ ಹಾಗು ಅವರೊಂದಿಗಿನ ಕೆಲವು ವ್ಯಕ್ತಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಹನುಮಂತನಾಯ್ಕ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಉಚ್ಛಾಟನೆಗೊಳಿಸಿರುವುದು ಸರಿಯಲ್ಲ. ಇದನ್ನು ಬಂಜಾರ ಸಮಾಜ ಖಂಡಿಸುತ್ತದೆ.
    ಮಂಡಲ ಅಧ್ಯಕ್ಷ ಎಂ. ಪ್ರಭಾಕರ್‌ರವರು ಪರಿಶಿಷ್ಟ ಜಾತಿಗೆ ಸೇರಿದ ಹನುಮಂತನಾಯ್ಕರವರನ್ನು ದುರ್ಬಳಕೆ ಮಾಡಿಕೊಂಡಿದ್ದು, ಅಲ್ಲದೆ ವಿನಾಕಾರಣ  ಇಲ್ಲಸಲ್ಲದ ಆರೋಪಗಳನ್ನು ಮಾಡಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಪ್ರಭಾಕರ್‌ರವರು ಮಾಡಿರುವ ಆರೋಪಗಳಿಗೆ ನೇರವಾಗಿ ಚರ್ಚಿಸಲು ಸಿದ್ದವಿದ್ದೇವೆ.
    ಪಕ್ಷದ ವರಿಷ್ಠರು ಈ ಸಂಬಂಧ ಗಮನ ಹರಿಸಿ ನ್ಯಾಯ ಒದಗಿಸಿಕೊಡಬೇಕು. ಅಲ್ಲದೆ ಹನುಮಂತನಾಯ್ಕ ಅವರನ್ನು ಪುನಃ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ ಹಾಗು ಬಂಜಾರ ಸಂಘದ ಅಧ್ಯಕ್ಷ ಪ್ರೇಮ್‌ಕುಮಾರ್ ಆಗ್ರಹಿಸಿದ್ದಾರೆ.

No comments:

Post a Comment