ಭದ್ರಾವತಿ, ಮಾ. ೧೮: ಮೆಸ್ಕಾಂ ಮಾಚೇನಹಳ್ಳಿ ೧೧೦/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ.೨೦ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೇ ಜೇಡಿಕಟ್ಟೆ, ಡೈರಿ ಸರ್ಕಲ್, ನಿದಿಗೆ, ಕೈಗಾರಿಕಾ ಪ್ರದೇಶ, ಶಿವರಾಂನಗರ, ವಿಶ್ವೇಶ್ವರಯ್ಯನಗರ ಸೇರಿದಂತೆ ಇನ್ನಿತರೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
No comments:
Post a Comment