ಭದ್ರಾವತಿ, ಮಾ. ೨೯: ಬಾರಂದೂರು ವಂದೇ ಮಾತರಂ ಟ್ರಸ್ಟ್ ವತಿಯಿಂದ ತಾಲೂಕಿನ ಅಂತರಗಂಗೆ-ಕೆ.ಎಚ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ವೈದ್ಯಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ ಮಾ.೩೦ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಶಸ್ತ್ರ ಚಿಕಿತ್ಸಾ ಹಾಗು ಸ್ವಯಂ ಪ್ರೇರಿತ ನೇತ್ರದಾನ ನೋಂದಣಿ ಶಿಬಿರ ಆಯೋಜಿಸಲಾಗಿದೆ.
ಅಂತರಗಂಗೆ, ಕೆ.ಎಚ್ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ವಂದೇ ಮಾತರಂ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಬಿ.ಎ ಪ್ರಸನ್ನಕುಮಾರ್, ಮೊ: ೮೮೬೧೬೪೭೦೪೬ ಅಥವಾ ಟ್ರಸ್ಟ್ ಉಪಾಧ್ಯಕ್ಷ ಬಿ. ರೇಣೋಜಿರಾವ್, ಮೊ: ೯೬೨೦೪೦೩೨೯೯ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment