Sunday, March 13, 2022

೩ನೇ ಮಾಸ್ಟರ್ ಗೇಮ್ಸ್‌ನಲ್ಲಿ ಅಶೋಕ್‌ಕುಮಾರ್‌ಗೆ ಚಿನ್ನದ ಪದಕ

ಕರ್ನಾಟಕ ರಾಜ್ಯ ೩ನೇ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ಭದ್ರಾವತಿ ಸಿದ್ದರೂಢನಗರದ ಶಂಕರಮಠ ಸಮೀಪದ ನಿವಾಸಿ ಎನ್ . ಅಶೋಕ್‌ಕುಮಾರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ಭದ್ರಾವತಿ, ಮಾ. ೧೩: ಮಾಸ್ಟರ್ ಗೇಮ್ಸ್ ಫೆಡರೇಷನ್(ಇಂಡಿಯಾ) ಮತ್ತು ಕರ್ನಾಟಕ ಮಾಸ್ಟರ್‍ಸ್ ಗೇಮ್ಸ್ ಅಸೋಸಿಯೇಷನ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿ ಅಜರ್ಕಾಡ್ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ೩ನೇ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ಸಿದ್ದರೂಢನಗರದ ಶಂಕರಮಠ ಸಮೀಪದ ನಿವಾಸಿ ಎನ್ . ಅಶೋಕ್‌ಕುಮಾರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ೫೫ ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ೫ ಕಿ.ಮೀ ನಡಿಗೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.  ೫೭ರ ವಯೋಮಾನದ ಅಶೋಕ್‌ಕುಮಾರ್‌ರವರು ಸ್ಟೇಟ್ ಬ್ಯಾಂಕ್ ಇಂಡಿಯಾ ಶಾಖಾ ವಿಭಾಗದ ವ್ಯವಸ್ಥಾಪಕ ಅಧಿಕಾರಿಯಾಗಿದ್ದು, ಇವರು ೨ನೇ ಬಾರಿಗೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ. ಒಟ್ಟು ೨ ಪದಕಗಳನ್ನು ಪಡೆದುಕೊಂಡಿದ್ದು, ಇವರ ಸಾಧನೆಗೆ ನಗರದ ಗಣ್ಯರು, ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.

No comments:

Post a Comment