ಜಿ. ರಾಜಲಕ್ಷ್ಮಿ
ಭದ್ರಾವತಿ, ಏ. ೧೩: ನಗರದ ಕೇಶವಪುರ ಬಡಾವಣೆ ನಿವಾಸಿ ಜಿ. ರಾಜಲಕ್ಷ್ಮಿ(೮೪) ಎಸ್. ಗೋವಿಂದ ರಾಜಶೆಟ್ಟಿ ಬುಧವಾರ ನಿಧನ ಹೊಂದಿದರು.
ಪತಿ, ಮೂವರು ಪುತ್ರರು ಹಾಗು ಇಬ್ಬರು ಪುತ್ರಿಯರನ್ನು ಹೊಂದಿದ್ದರು. ರಾಜಲಕ್ಷ್ಮಿಯವರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇವರ ಅಂತ್ಯಕ್ರಿಯೆ ಸಂಜೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಆರ್ಯವೈಶ್ಯ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ
ReplyDeleteಕೆ.ಎಂ.ಸತೀಶ್