Thursday, April 14, 2022

ಅಂಬೇಡ್ಕರ್ ಜಯಂತಿ : ಬೃಹತ್ ಮೆರವಣಿಗೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಭದ್ರಾವತಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ವತಿಯಿಂದ ಅಂಬೇಡ್ಕರ್ ಭಾವಚಿತ್ರದೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಯಿತು
    ಭದ್ರಾವತಿ, ಏ. ೧೪: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ವತಿಯಿಂದ ಅಂಬೇಡ್ಕರ್ ಭಾವಚಿತ್ರದೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಯಿತು.
    ನಗರದ ಬಿ.ಎಚ್ ರಸ್ತೆ  ಅಂಡರ್ ಬ್ರಿಡ್ಜ್ ಬಳಿ ಡಿಎಸ್‌ಎಸ್ ಮುಖಂಡರು ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ  ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
    ಮೆರವಣಿಗೆ ಅಂಬೇಡ್ಕರ್ ವೃತ್ತದಿಂದ ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಜೈಭೀಮಾ ನಗರದವರೆಗೆ ಸಾಗಿದು. ಮೆರವಣಿಗೆಯಲ್ಲಿ ಕಲಾತಂಡಗಳು ಮೆರಗು ತಂದುಕೊಟ್ಟವು.
    ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ಜಿಲ್ಲಾ ಸಂಚಾಲಕ ಚಿನ್ನಯ್ಯ, ಪ್ರಮುಖರಾದ ಕೆ. ರಂಗನಾಥ್, ಈಶ್ವರಪ್ಪ, ಎಸ್. ಉಮಾ, ಶಾಂತಿ, ಸಿ. ಜಯಪ್ಪ, ಕಾಣಿಕ್‌ರಾಜ್, ಜಿಂಕ್‌ಲೈನ್ ಮಣಿ, ಎನ್. ಗೋವಿಂದ, ದಾಸ್ ಸೇರಿದಂತೆ ಡಿಎಸ್‌ಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

No comments:

Post a Comment