ಭದ್ರಾವತಿ ನ್ಯೂಟೌನ್ ಭದ್ರಾವತಿ ಪ್ರಜಾ ವಿಮೋಚನೆ ಸಂಘ(ಬಿಪಿಎಲ್)ದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್ರವರ ೧೩೧ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ವಿಐಎಸ್ಎಲ್ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಬಸಂತ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಏ. ೧೬: ನಗರದ ನ್ಯೂಟೌನ್ ಭದ್ರಾವತಿ ಪ್ರಜಾ ವಿಮೋಚನೆ ಸಂಘ(ಬಿಪಿಎಲ್)ದ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ರವರ ೧೩೧ನೇ ಜನ್ಮದಿನೋತ್ಸವ ಆಚರಿಸಲಾಯಿತು.
ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ದೇವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ವಿಐಎಸ್ಎಲ್ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಬಸಂತ್ ಕುಮಾರ್, ಮುಖಂಡರಾದ ಜಿ ರಾಜು, ರಾಜೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಘದ ಗೌರವ ಅಧ್ಯಕ್ಷ ಎಸ್.ಕೆ ಸುಧೀಂದ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಕ್ಷ ಜಗದೀಶ ಅಧ್ಯಕ್ಷತೆ ವಹಿಸಿದ್ದರು. ಸಿಹಿ ಹಂಚಿಕೆ ಜೊತೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಉಪಾಧ್ಯಕ್ಷರಾದ ವಿಲಿಯಂ, ಸಂಪತ್, ಜಿ. ಗೋವಿಂದ, ಪ್ರಧಾನ ಕಾರ್ಯದರ್ಶಿ ಶ್ಯಾಮ್, ಕಾರ್ಯಾಧ್ಯಕ್ಷ ರವಿಕುಮಾರ್, ಖಜಾಂಚಿ ಮುರಳಿಕೃಷ್ಣ, ಕಾರ್ಯದರ್ಶಿ ಸುನಿಲ್ ಕುಮಾರ್, ಲೋಕೇಶ್, ಡಿಎಸ್ಎಸ್ ಮುಖಂಡರಾದ ದಾಸ್, ಸಂಘಟನಾ ಕಾರ್ಯದರ್ಶಿ ಪುರುಷೋತ್ತಮ್, ರವೀಂದ್ರಪ್ಪ, ಅಜಂತ್ಕುಮಾರ್, ಸದಸ್ಯರುಗಳಾದ ವೆಂಕಟೇಶ್, ಶ್ರೀನಿವಾಸ್, ಶ್ರೀಕಾಂತ್, ಸಂದೀಪ್, ಅನಿಲ್, ಸಂಜೀವರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment