Tuesday, April 26, 2022

ಕೂಡ್ಲಿಗೆರೆ ಗ್ರಾಮದಲ್ಲಿ ನೂತನ ನಾಡಕಛೇರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಸುಮಾರು ೧೮.೫ ಲಕ್ಷ ರು. ವೆಚ್ಚದಲ್ಲಿ ನೂತನ ನಾಡಕಛೇರಿ ನಿರ್ಮಾಣಕ್ಕೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
    ಭದ್ರಾವತಿ, ಏ. ೨೬: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಸುಮಾರು ೧೮.೫ ಲಕ್ಷ ರು. ವೆಚ್ಚದಲ್ಲಿ ನೂತನ ನಾಡಕಛೇರಿ ನಿರ್ಮಾಣಕ್ಕೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
    ಕೂಡ್ಲಿಗೆರೆಯಲ್ಲಿ ಬಹಳ ವರ್ಷಗಳಿಂದ ನಾಡಕಛೇರಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಸಹ ಸ್ವಂತ ಕಟ್ಟಡ ಹೊಂದಿರಲಿಲ್ಲ. ಈ ಹಿನ್ನಲೆಯಲ್ಲಿ ಹೊಸ ಕಟ್ಟಡಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
    ಉಪತಹಸೀಲ್ದಾರ್ ನಾರಾಯಣಗೌಡ, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾದೇವಿ ತಿಪ್ಪೇಶ್, ಉಪಾಧ್ಯಕ್ಷ ಕುಬೇರ್‌ನಾಯ್ಕ್, ಸುಗ್ರಾಮ ಅಧ್ಯಕ್ಷೆ ಗೌರಮ್ಮ, ಹಾಗು ಗ್ರಾ.ಪಂ. ಸದಸ್ಯರು, ರೈತರ ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಎನ್.ಎಚ್ ಮಹೇಶ್, ಪ್ರಮುಖರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಲ್ ಷಡಾಕ್ಷರಿ, ದಶರಥಗಿರಿ, ಎಸ್ ಮಹಾದೇವ, ಜಯಣ್ಣ, ಪ್ರವೀಣ್‌ನಾಯ್ಕ್ ಹಾಗು ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment