ಭಾನುವಾರ, ಏಪ್ರಿಲ್ 17, 2022

ಏ.೧೭ರಂದು ಜನ್ನಾಪುರ ಕೆರೆ ಅಭಿವೃದ್ಧಿಪಡಿಸುವ ಸಂಬಂಧ ಸಭೆ

    ಭದ್ರಾವತಿ, ಏ. ೧೭:  ಕಸಬಾ ಹೋಬಳಿ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ ೨೦ ಗುಂಟೆ ಸರ್ಕಾರಿ ಕೆರೆ ಅನಧಿಕೃತ ಒತ್ತುವರಿ ತೆರವುಗೊಳಿಸಿ, ಸ್ವಚ್ಛಗೊಳಿಸಿ, ಅಭಿವೃದ್ಧಿಪಡಿಸುವ ಸಂಬಂಧ ಏ.೧೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ತಹಸೀಲ್ದಾರ್ ಆರ್. ಪ್ರದೀಪ್, ಉಪಸ್ಥಿತರಿರುವರು. ನಗರಸಭೆ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ, ನೀರಾವರಿ ಇಲಾಖೆ ಬಿಆರ್‌ಎಲ್‌ಬಿಸಿ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಶಿವಮೊಗ್ಗ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ