Wednesday, April 27, 2022

ಉಚಿತ ಸಾಮೂಹಿಕ ವಿವಾಹ : ಸದುಪಯೋಗಕ್ಕೆ ಕರೆ

    ಭದ್ರಾವತಿ, ಏ. ೨೭: ವಿಶ್ವ ಹಿಂದು ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ೩೮ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ.೨೯ರ ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ಸಿದ್ದಾರೂಢನಗರ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾಭವನದಲ್ಲಿ ನಡೆಯಲಿದೆ.
    ಕಡ್ಡಾಯವಾಗಿ ವರನಿಗೆ ೨೧ ವರ್ಷ, ವಧುವಿಗೆ ೧೮ ವರ್ಷ ತುಂಬಿರಬೇಕು. ಎರಡನೇ ಮದುವೆಗೆ ಅವಕಾಶವಿರುವುದಿಲ್ಲ. ವಿವಾಹಕ್ಕೆ ಅಪೇಕ್ಷೆಯುಳ್ಳವರು ಮೇ.೧೦ರೊಳಗೆ ಕೋರಿಕೆ ಪತ್ರ ನೀಡುವುದು. ವಿಧವಾ ವಿವಾಹಕ್ಕೆ ಅವಕಾಶವಿದ್ದು, ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶತಾಯುಷಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು.
    ಸಾರ್ವಜನಿಕರು, ದಾನಿಗಳು, ಗಣ್ಯರು, ಸಂಘ-ಸಂಸ್ಥೆಗಳು ಸಾಮೂಹಿಕ ವಿವಾಹಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಮೂಲಕ ಯಶಸ್ವಿಗೊಳಿಸಲು ಸಹಕರಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೮೭೬೨೨೮೭೦೧೮ ಅಥವಾ ೯೮೮೦೭೭೯೨೯೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

No comments:

Post a Comment