ಭದ್ರಾವತಿಯಲ್ಲಿ ಜೆಡಿಎಸ್ ಮುಖಂಡ, ನಗರಸಭೆ ಮಾಜಿ ಸದಸ್ಯ ಮುತುರ್ಜಾಖಾನ್ರವರು ಗುರುವಾರ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಜೆಡಿಎಸ್ ಮುಖಂಡರು ಪಾಲ್ಗೊಂಡು ಮುಸ್ಲಿಂ ಸಮುದಾಯದವರಿಗೆ ಹಬ್ಬದ ಶುಭಾಶಯ ಕೋರಿದರು.
ಭದ್ರಾವತಿ: ಜೆಡಿಎಸ್ ಮುಖಂಡ, ನಗರಸಭೆ ಮಾಜಿ ಸದಸ್ಯ ಮುತುರ್ಜಾಖಾನ್ರವರು ಗುರುವಾರ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಜೆಡಿಎಸ್ ಮುಖಂಡರು ಪಾಲ್ಗೊಂಡು ಮುಸ್ಲಿಂ ಸಮುದಾಯದವರಿಗೆ ಹಬ್ಬದ ಶುಭಾಶಯ ಕೋರಿದರು.
ಪವಿತ್ರ ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಸುಮಾರು ೩೦ ದಿನಗಳವರೆಗೆ ಉಪವಾಸ ಆಚರಣೆಯಲ್ಲಿ ತೊಡಗುವ ಮುಸ್ಲಿಂ ಸಮುದಾಯದವರು ಕೊನೆಯಲ್ಲಿ ಇಫ್ತಾರ್ ಕೂಟ ಆಯೋಜಿಸುವುದು ವಾಡಿಕೆಯಾಗಿದೆ.
ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷರೂ ಸಹ ಆಗಿರುವ ಮುತುರ್ಜಾಖಾನ್ರವರು ಇಫ್ತಾರ್ ಕೂಟ ಆಯೋಜಿಸುವ ಮೂಲಕ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಆಹ್ವಾನಿಸಿದ್ದರು.
ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಧುಕುಮಾರ್, ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಮಾಜಿ ಸದಸ್ಯರಾದ ವಿಶಾಲಾಕ್ಷಿ, ಆನಂದ್, ಮೈಲಾರಪ್ಪ, ಲೋಕೇಶ್ವರ್ ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment