Wednesday, April 20, 2022

ಏ.೨೩ರಂದು ಛಲವಾದಿ ಭವನದ ಶಂಕುಸ್ಥಾಪನೆ, ವಾರ್ಷಿಕೋತ್ಸವ


    ಭದ್ರಾವತಿ, ಏ. ೨೦: ನಗರದ ಛಲವಾದಿಗಳ(ಪ.ಜಾ) ಸಮಾಜದ ವತಿಯಿಂದ ಏ.೨೩ರಂದು ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೧ನೇ ಜನ್ಮದಿನೋತ್ಸವ ಅಂಗವಾಗಿ ಸಮಾಜದ ವಾರ್ಷಿಕೋತ್ಸವ ಹಾಗು ಛಲವಾದಿ ಭವನದ ಶಂಕುಸ್ಥಾಪನೆ ಏ.೨೩ರಂದು ಸಂಜೆ ೫ ಗಂಟೆಗೆ ಉಂಬ್ಳೆಬೈಲ್ ರಸ್ತೆ, ನ್ಯೂಟೌನ್, ಜಯಶ್ರೀ ವೃತ್ತದ ಸಮೀಪದಲ್ಲಿರುವ ಸಮಾಜದ ಆವರಣದಲ್ಲಿ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಶಂಕುಸ್ಥಾಪನೆ ನೆರವೇರಿಸಲಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವ ನಾರಾಯಣ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಲಿದ್ದಾರೆ. ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.
ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ ಉಪನ್ಯಾಸ ನೀಡಲಿದ್ದು, ನಗರಸಭೆ ಉಪಾಧ್ಯಕ್ಷ, sಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರತಿಭಾ ಪುರಸ್ಕಾರ ನಡೆಸಿಕೊಡಲಿದ್ದಾರೆ. ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಸದಸ್ಯರಾದ ಸರ್ವಮಂಗಳ ಭೈರಪ್ಪ, ಪ್ರೇಮ ಬದರಿ ನಾರಾಯಣ, ಉದಯಕುಮಾರ್, ಅನ್ನಪೂರ್ಣ, ಕಾರೇಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಮಮತ, ದೊಡ್ಡೇರಿ ಗ್ರಾ.ಪಂ. ಉಪಾಧ್ಯಕ್ಷೆ ಹೇಮಾವತಿ, ಸಿಂಗನಮನೆ ಗ್ರಾ.ಪಂ. ಸದಸ್ಯೆ ಚಂದನಮಧು, ಹಿರಿಯೂರು ಗ್ರಾ.ಪಂ. ಸದಸ್ಯ ಕಿರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಕ್ರೀಡಾ ಸ್ಪರ್ಧೆ:
    ಸಮಾಜದ ವಾರ್ಷಿಕೋತ್ಸವದ ಅಂಗವಾಗಿ ಏ.೨೨ರಂದು ಬೆಳಿಗ್ಗೆ ೯ ಗಂಟೆಗೆ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
    ಪ್ರತಿಭಾ ಪುರಸ್ಕಾರ:
    ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗು ಪದವಿ ಪರೀಕ್ಷೆಗಳಲ್ಲಿ ಶೇ.೮೫ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಸಮಾಜದ ವಿದ್ಯಾರ್ಥಿಗಳು ಅಂಬೇಡ್ಕರ್ ಗ್ರಂಥಾಲಯ, ಜಯಶ್ರೀ ವೃತ್ತ, ನ್ಯೂಟೌನ್, ಭದ್ರಾವತಿ ಈ ವಿಳಾಸದಲ್ಲಿ ಅಂಕಪಟ್ಟಿ ಮಾಹಿತಿಯೊಂದಿಗೆ ಮೊಬೈಲ್ ಸಂಖ್ಯೆ ನೀಡುವುದು. ಹೆಚ್ಚಿನ ಮಾಹಿತಿಗೆ ಮೊ: ೯೪೪೯೭೮೦೨೧೬ ಅಥವಾ ೭೯೭೫೦೫೨೮೧೦ ಸಂಖ್ಯೆಗೆ ಸಂಪರ್ಕಿಸುವಂತೆ ಸಮಾಜದ ಪ್ರಮುಖರಾದ  ಡಿ. ನರಸಿಂಹಮೂರ್ತಿ ಮತ್ತು ಎಂ. ತಿಪ್ಪೇಸ್ವಾಮಿ ಕೋರಿದ್ದಾರೆ.

No comments:

Post a Comment