ಭದ್ರಾವತಿ, ಏ. ೨೦: ನಗರಸಭೆ ವಾರ್ಡ್ ೩೧ರ ಜಿಂಕ್ಲೈನ್ ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆ ಅಡಿಯಲ್ಲಿ ಅಜಾದಿ-ಕಾ-ಅಮೃತ್ ಮಹೋತ್ಸವ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಭದ್ರಾವತಿ, ಏ. ೨೦: ನಗರಸಭೆ ವಾರ್ಡ್ ೩೧ರ ಜಿಂಕ್ಲೈನ್ ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆ ಅಡಿಯಲ್ಲಿ ಅಜಾದಿ-ಕಾ-ಅಮೃತ್ ಮಹೋತ್ಸವ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಗರೀಬ್ ಕಲ್ಯಾಣ ಅನ್ನಯೋಜನೆಯಡಿ ಕೇಂದ್ರ ಸರ್ಕಾರ ಪ್ರತಿ ಪಡಿತರದಾರನಿಗೆ ೫ ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ನೀಡುತ್ತಿದ್ದು, ಇದರ ಜೊತೆಗೆ ರಾಜ್ಯ ಸರ್ಕಾರದ ೧ ಕೆ.ಜಿ ಹೆಚ್ಚುವರಿ ಅಕ್ಕಿ ಸೇರಿ ಒಟ್ಟು ೧೧ ಕೆ.ಜಿ ಅಕ್ಕಿಯನ್ನು ಮಾ.೧೯ರಿಂದ ನೀಡಲಾಗುತ್ತಿದೆ. ಇದರ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದ ನಿರ್ದೇಶನದ ಮೇರೆಗೆ ಪ್ರತಿ ನ್ಯಾಯಾಬೆಲೆ ಅಂಗಡಿಯಲ್ಲೂ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ನಗರಸಭೆ ಸದಸ್ಯೆ ಪಲ್ಲವಿ, ನಗರ ಆಹಾರ ನಿರೀಕ್ಷಕಿ ಗಾಯತ್ರಿದೇವಿ, ಜಾಗೃತಿ ಸಮಿತಿ ಸದಸ್ಯೆ ಸುಶೀಲಮ್ಮ, ನ್ಯಾಯಬೆಲೆ ಅಂಗಡಿ ಮಾಲೀಕ ಸಿದ್ದಲಿಂಗಯ್ಯ, ಮುಖಂಡರಾದ ದಿಲೀಪ್, ಎಚ್.ಕೆ ರಾಜು, ಜಿ. ಕುಮಾರ್, ನಾಗರಾಜ ಕದಂ, ಪಡಿತರದಾರರು ಉಪಸ್ಥಿತರಿದ್ದರು.
No comments:
Post a Comment