Thursday, April 14, 2022

ಅಂಬೇಡ್ಕರ್ ಜಯಂತಿಯಂದು ಗೌತಮ ಬುದ್ಧನ ಪ್ರತಿಮೆ ಅನಾವರಣ

ಭದ್ರಾವತಿಯಲ್ಲಿ: ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಜಗನ್ನಾಥ ಅವರ ನಿವಾಸದಲ್ಲಿ ಗುರುವಾರ ಅಂಬೇಡ್ಕರ್ ಜಯಂತಿಯಂದು ಗೌತಮ ಬುದ್ಧನ ಪ್ರತಿಮೆ ಅನಾವರಣಗೊಳಿಸಲಾಯಿತು.
    ಭದ್ರಾವತಿ, ಏ. ೧೪: ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಜಗನ್ನಾಥ ಅವರ ನಿವಾಸದಲ್ಲಿ ಗುರುವಾರ ಅಂಬೇಡ್ಕರ್ ಜಯಂತಿಯಂದು ಗೌತಮ ಬುದ್ಧನ ಪ್ರತಿಮೆ ಅನಾವರಣಗೊಳಿಸಲಾಯಿತು.
    ನಗರದ ತರೀಕೆರೆ ರಸ್ತೆಯ ಬಸವಮಂಟಪ ಸಮೀಪದಲ್ಲಿರುವ ಬಿ.ಕೆ ಜಗನ್ನಾಥ ಅವರ ನಿವಾಸದಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪ್ರತಿಮೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಅನಾವರಣಗೊಳಿಸಿದರು. ಬೌದ್ಧ ಧರ್ಮದ ಉಪಾಸಕರಾದ ಪ್ರೊ. ಎಚ್. ರಾಚಪ್ಪ ಬೌದ್ಧ ಧರ್ಮ ಆಚರಣೆಗಳನ್ನು ನೆರವೇರಿಸಿದರು.
    ಸಂಗಮೇಶ್ವರ್ ಸಹೋದರರಾದ ಬಿ.ಕೆ ಜಗನ್ನಾಥ, ಬಿ.ಕೆ ಮೋಹನ್, ಬಿ.ಕೆ ಶಿವಕುಮಾರ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್ ಹಾಗು ಬೌದ್ಧ ಧರ್ಮದ ಅನುಯಾಯಿಗಳಾದ ಡಿಎಸ್‌ಎಸ್ ಮುಖಂಡರಾದ ಸತ್ಯ, ಚಿನ್ನಯ್ಯ ಸೇರಿದಂತೆ ಉಪಸ್ಥಿತರಿದ್ದರು. ನಗರಸಭಾ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು.

No comments:

Post a Comment