Monday, April 18, 2022

ವಿಜೃಂಭಣೆಯಿಂದ ಜರುಗಿದ ದೇವರಹಳ್ಳಿ ಶ್ರೀ ರಂಗನಾಥಸ್ವಾಮಿ ರಥೋತ್ಸವ

ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ರಂಗನಾಥಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಏ. ೧೮: ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ರಂಗನಾಥಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
    ರಥೋತ್ಸವ ಅಂಗವಾಗಿ ಶ್ರೀ ರಂಗನಾಥಸ್ವಾಮಿಗೆ ವಿಶೇಷ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಅಚರಣೆಗಳು ಜರುಗಿದವು. ದೇವರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು. ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಥೋತ್ಸವ ಏ.೧೯ರವರೆಗೆ ನಡೆಯಲಿದೆ.

No comments:

Post a Comment