ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಹಿರಿಯ ನಾಗರೀಕರಿಗೆ ಸಿಹಿ ತಿನ್ನಿಸುವ ಮೂಲಕ ವಿಶೇಷ ಗ್ರಾಮ ಸಭೆ ನಡೆಸಿ ಪಂಚಾಯತ್ ರಾಜ್ ದಿವಸ್ ಆಚರಿಸಲಾಯಿತು.
ಭದ್ರಾವತಿ, ಏ. ೨೪: ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಹಿರಿಯ ನಾಗರೀಕರಿಗೆ ಸಿಹಿ ತಿನ್ನಿಸುವ ಮೂಲಕ ವಿಶೇಷ ಗ್ರಾಮ ಸಭೆ ನಡೆಸಿ ಪಂಚಾಯತ್ ರಾಜ್ ದಿವಸ್ ಆಚರಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಆರ್.ಡಿ ಶೇಖರಪ್ಪ ವಿಶೇಷ ಗ್ರಾಮ ಸಭೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಾಗು ಪಿ.ಎಂ ಕಿಸಾನ್ ಯೋಜನಾ ಕ್ರಿಡಿಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ ಶಂಕರಪ್ಪ, ಅಭಿವೃದ್ಧಿ ಅಧಿಕಾರಿ ಸುರೇಶ್ ಹಾಗು ಸದಸ್ಯರು, ರೈತರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಾರ್ಯದರ್ಶಿ ಭಾಸ್ಕರ್ ಸ್ವಾಗತಿಸಿದರು. ಅರಕೆರೆ ಭೈರೇಶ್ಕುಮಾರ್ ವಂದಿಸಿದರು.
No comments:
Post a Comment