Thursday, April 14, 2022

ಸಚಿವ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಡಿ : ಎಎಪಿ ಆಗ್ರಹ

ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ

ಸಚಿವ ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಭದ್ರಾವತಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಏ. ೧೪: ಸಚಿವ ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
    ಗುತ್ತಿಗೆದಾರನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಕಾರಣಕರ್ತರಾಗಿದ್ದಾರೆಂದು ಆರೋಪಿಸಿದ ಪಕ್ಷದ ಮುಖಂಡರು, ಇಂದು ಎಲ್ಲೆಡೆ ಭ್ರಷ್ಟಾಚಾರ ಮಿತಿ ಮೀರಿದೆ. ಶೇ.೪೦ರಷ್ಟು ಕಮಿಷನ್ ದಂಧೆಯಿಂದಾಗಿ ಕಾಮಗಾರಿಗಳಲ್ಲಿ ಗುಣಮಟ್ಟ ನಿರೀಕ್ಷಿಸಲು ಅಸಾಧ್ಯವಾಗಿದೆ. ಈ ರೀತಿಯ ಪ್ರಕರಣಗಳು ಸಾಕಷ್ಟು ನಡೆಯುತ್ತಿವೆ. ಇದರ ಪರಿಣಾಮವನ್ನು ಮಧ್ಯಮ ಹಾಗು ಬಡವರ್ಗದವರು ಎದುರಿಸುವಂತಾಗಿದ್ದು, ನೆಮ್ಮದಿಯಿಂದ ಬದುಕುವುದು ಅಸಾಧ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಈಶ್ವರಪ್ಪನವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.  
    ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪ್ರಮುಖರಾದ ಡಿ.ಎಂ ಚಂದ್ರಪ್ಪ, ಪರಮೇಶ್ವರಚಾರ್, ಎ. ಮಸ್ತಾನ್, ಜೋಸೆಫ್, ಅಬ್ದುಲ್ ಖದೀರ್, ರಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment