ಭದ್ರಾವತಿ ಭೂತನಗುಡಿ ಶ್ರೀ ಶನೈಶ್ವರಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಭೂತಪ್ಪನವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಶ್ರೀ ಮಹಾಗಣಪತಿ ಹೋಮ, ಅನ್ನಸಂತರ್ಪಣೆ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು.
ಭದ್ರಾವತಿ, ಏ. ೪: ನಗರದ ಭೂತನಗುಡಿ ಶ್ರೀ ಶನೈಶ್ವರಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಭೂತಪ್ಪನವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಶ್ರೀ ಮಹಾಗಣಪತಿ ಹೋಮ, ಅನ್ನಸಂತರ್ಪಣೆ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು.
ವಿಶೇಷ ಅಲಂಕಾರ ಪೂಜೆ, ಶ್ರೀ ಶನೈಶ್ವರ ಶಾಂತಿ ಹೋಮ, ಶ್ರೀ ದುರ್ಗಾ ಹೋಮ, ದೇವತಾ ಕಲಾ ಹೋಮ, ಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ದೇವಸ್ಥಾನದ ಅರ್ಚಕರಾದ ಸುಬ್ರಹ್ಮಣ್ಯ ಜೋಯ್ಸ್, ಜಯರಾಂ, ಸುಬ್ರಹ್ಮಣ್ಯ ಪ್ರಸಾದ್ ಹಾಗು ತಾಲೂಕು ಅರ್ಚಕರ ಸಭಾಮಂಡಳಿ ಗೌರವಾಧ್ಯಕ್ಷ ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು.
ಏ.೫ರ ಮಧ್ಯಾಹ್ನ ೩ ಗಂಟೆಗೆ ಶ್ರೀ ಶನೈಶ್ವರಸ್ವಾಮಿ ಮತ್ತು ಶ್ರೀ ಕೆಂಚಮ್ಮದೇವಿಯ ರಾಜಬೀದಿ ಉತ್ಸವ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment