ಭದ್ರಾವತಿ ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ದೇವಿಗೆ ಕಲಾ ತತ್ತ್ವಾಧಿವಾಸ ಹೋಮ, ನವ ಕಲಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಭದ್ರಾವತಿ, ಏ. ೨೪: ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಭಾನುವಾರ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಶ್ರೀ ದೇವಿಗೆ ಕಲಾ ತತ್ತ್ವಾಧಿವಾಸ ಹೋಮ, ನವ ಕಲಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಪೊಲೀಸ್ ಉಮೇಶ್ ನೇತೃತ್ವದ ಸ್ನೇಹ ಜೀವಿ ಬಳಗದಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ದಾನಿಗಳಾದ ಸುನಿಲ್, ವಿ.ಎನ್ ವೆಂಕಟೇಶ್, ಎನ್. ರಾಜು, ಆನಂದ್(ಮೆಡಿಕಲ್), ಜಿ. ಧರ್ಮಪ್ರಸಾದ್, ಜಿ. ಆನಂದಕುಮಾರ್, ಗೋಕುಲ್, ರಮೇಶ್, ಸುಹಾಸ್ಗೌಡ ಮತ್ತು ಮುಳ್ಕೆರೆ ಲೋಕೇಶ್, ಸೇವಾಕರ್ತರಾದ ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಸದಸ್ಯರಾದ ಮಣಿ, ಬಿ.ಎಂ ಮಂಜುನಾಥ್, ಅನುಪಮ ಚನ್ನೇಶ್, ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್, ಸುರೇಶ್, ಬಿ.ಕೆ ಆನಂದ್, ಎನ್. ಕೃಷ್ಣಪ್ಪ, ಗಣೇಶ್ರಾವ್, ನರಸಿಂಹಪ್ಪ, ಸತ್ಯ, ಚಿನ್ನಯ್ಯ ಸೇರಿದಂತೆ ಜೈಭೀಮ್ ನಗರ ಸೇರಿದಂತೆ ಸುತ್ತಮುತ್ತಲಿನ ಭಕ್ತಾಧಿಗಳು ಪಾಲ್ಗೊಂಡಿದ್ದರು.
ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ಎನ್. ಶಿವ, ವಿ.ಎನ್ ವೆಂಕಟೇಶ್, ಅಧ್ಯಕ್ಷ ಕೆ. ಮಂಜುನಾಥ್, ಕಾರ್ಯಾಧ್ಯಕ್ಷ ಎಂ. ನಾಗರಾಜ್, ಉಪಾಧ್ಯಕ್ಷರಾದ ಎನ್. ಕುಮಾರ್, ಎನ್. ವಸಂತ, ಕರಿಗೌಡ, ಪ್ರಧಾನ ಕಾರ್ಯದರ್ಶಿ ಓ. ನರಸಿಂಹ, ಸಹ ಕಾರ್ಯದರ್ಶಿಗಳಾದ ಏಳುಮಲೈ, ಎಸ್. ರಾಜ, ಖಜಾಂಚಿ ಎನ್. ಹರೀಶ್, ಟಿ.ಎನ್ ಗುರುರಾಜ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಭದ್ರಾವತಿ ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಭಾನುವಾರ ವಿಜೃಂಭಣೆಯಿಂದ ಜರುಗಿತು.
No comments:
Post a Comment