ಎಚ್.ಎಂ ಮನುಕುಮಾರ್
ಭದ್ರಾವತಿ, ಮೇ. ೧೮ : ಇಲ್ಲಿನ ನಗರಸಭೆ ನೂತನ ಪೌರಾಯುಕ್ತರಾಗಿ ಎಚ್.ಎಂ ಮನುಕುಮಾರ್ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಮನುಕುಮಾರ್ ೨೦೧೧ನೇ ಸಾಲಿನ ಕರ್ನಾಟಕ ಪೌರಾಡಳಿತ ಸೇವೆಯ ಮುಖ್ಯಾಧಿಕಾರಿ ಶ್ರೇಣಿ-೧ರ ಗ್ರೂಪ್-ಬಿ ಅಧಿಕಾರಿಯಾಗಿದ್ದಾರೆ. ಸ್ಥಳ ನಿರೀಕ್ಷೆಯಲ್ಲಿದ್ದ ಇವರನ್ನು ಮೊದಲ ಬಾರಿಗೆ ಪೌರಾಯುಕ್ತರ ಹುದ್ದೆಗೆ ನಿಯೋಜನೆಗೊಳಿಸಿ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಆದೇಶ ಹೊರಡಿಸಿದ್ದಾರೆ.
ಸುಮಾರು ೧ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕೆ. ಪರಮೇಶ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.
No comments:
Post a Comment