Tuesday, May 10, 2022

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಎಸ್.ಜಿ ಸುರೇಶ್

    ಭದ್ರಾವತಿ, ಮೇ. ೧೦: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಎಚ್.ಜಿ ಸುರೇಶ್ ಆಯ್ಕೆಯಾಗಿದ್ದಾರೆ.
        ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಆರ್. ಮಂಜುನಾಥ್ ಮತ್ತು ಎಸ್. ವಿನೋದ್‌ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಪಿ. ರಾಕೇಶ್, ಸಹಕಾರ್ಯದರ್ಶಿಗಳಾಗಿ ವಿ. ಗುಣಶೇಖರ್, ಎನ್.ಆರ್ ವಿನಯ್‌ಕುಮಾರ್, ಅಂತೋಣಿ ದಾಸ್, ಖಜಾಂಚಿಯಾಗಿ ಜಿ. ಆನಂದ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಂಕರಲಿಂಗೇಗೌ, ಪ್ರಸನ್ನಬಾಬು, ನಂಜೇಗೌಡ, ಜೆ. ಕಿರಣ್, ಶಿವಣ್ಣಗೌಡ, ಬಿ. ದೇವರಾಜ, ಆರ್. ಅರುಣ್, ಎ.ಪಿ ಶೇಷಪ್ಪ ಗೌಡ ಮತ್ತು ಸುಬ್ರಮಣಿ ಚುನಾಯಿತರಾಗಿದ್ದರು. ಉಳಿದಂತೆ ಬಿ.ಟಿ ವಾಸುದೇವ, ಎಸ್.ಕೆ ಮಂಜುನಾಥ್ ಮತ್ತು ಪಿ. ಅವಿನಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಕಾರ್ಖಾನೆಯಲ್ಲಿ ಸುಮಾರು ೧೧೪೫ ಗುತ್ತಿಗೆ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದು, ಬಹುತೇಕ ಮಂದಿ ಮತ ಚಲಾಯಿಸಿದರು. ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆ ವರೆಗೆ ಮತದಾನ ನಡೆಯಿತು. ಚುನಾವಣಾಧಿಕಾರಿಯಾಗಿ ಡಾ.ಎಸ್. ಸುಮಂತ್‌ಕುಮಾರ್ ಕರ್ತವ್ಯ ನಿರ್ವಹಿಸಿದರು.

No comments:

Post a Comment