Friday, May 13, 2022

ಮೇ.೧೬ರಂದು ಸಾಮೂಹಿಕ ವಿವಾಹ

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಕ್ಕುಂದ ಗ್ರಾಮದ ಶ್ರೀ ಗುಡ್ಡದ ಕೆಂಚಮ್ಮ ಹಾಗು ಮಾತಂಗಮ್ಮ ಗವಿಸಿದ್ದೇಶ್ವರ ದೇವಸ್ಥಾನ.
    ಭದ್ರಾವತಿ, ಮೇ. ೧೩: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಕ್ಕುಂದ ಗ್ರಾಮದ ಶ್ರೀ ಗುಡ್ಡದ ಕೆಂಚಮ್ಮ ಹಾಗು ಮಾತಂಗಮ್ಮ ಗವಿಸಿದ್ದೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಮೇ.೧೬ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಶಿವಮೊಗ್ಗ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಅಂದು ಬೆಳಿಗ್ಗೆ ೯.೫೦ ರಿಂದ ೧೦.೫೦ರವರೆಗೆ ಸಾಮೂಹಿಕ ವಿವಾಹ ನಡೆಯಲಿದ್ದು, ಅಲ್ಲದೆ ಶ್ರೀ ದೇವಿಯವರ ೧೦೧ ಎಡೆ ಹಾಗು ಚಂಡಿಕಾ ಹೋಮ ಕಾರ್ಯಕ್ರಮ ನಡೆಯಲಿದೆ.
    ಇದಕ್ಕೂ ಮೊದಲು ಬೆಳಿಗ್ಗೆ ೮ ಗಂಟೆಗೆ ಉಕ್ಕುಂದ ಗ್ರಾಮ ಒಳಗೊಂಡಂತೆ ಸುತ್ತಮುತ್ತಲಿನ ಗ್ರಾಮಗಳ ದೇವಾನು ದೇವತೆಗಳ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.


No comments:

Post a Comment