ಎಚ್. ರವಿಕುಮಾರ್
ಭದ್ರಾವತಿ, ಮೇ. ೯: ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ನೆರೆರಾಜ್ಯಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಬಿ.ಸಿ ಪಾಟೀಲ್ ವಿರುದ್ಧ ನ್ಯಾಯಾಂಗ ತನಿಖೆ ನಡೆಯಬೇಕೆಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.
ಸರ್ಕಾರ ಸಬ್ಸಿಡಿ ದರದಲ್ಲಿ ನೀಡುವ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಸುಳ್ಳು ದಾಖಲೆ ನೀಡಿ ರೈತರ ಹೆಸರಿನಲ್ಲಿ ಖರೀದಿಸಲಾಗುತ್ತಿದೆ. ೪೫ ಕೆ.ಜಿ ತೂಕದ ಒಂದು ಚೀಲಕ್ಕೆ ೨೬೬ ರು. ನೀಡಲಾಗುತ್ತಿದೆ. ಈ ರಸಗೊಬ್ಬರವನ್ನು ಬೇರೆ ಚೀಲಗಳಿಗೆ ಬದಲಿಸಿ ನೆರೆರಾಜ್ಯಗಳಿಗೆ ಸುಮಾರು ೧,೬೦೦ ರು.ಗಳಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ರಾಜ್ಯ ರೈತರಿಗೆ ರಸಗೊಬ್ಬರದ ಅಭಾವ ಎದುರಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಆರೋಪಿಸಿದ್ದಾರೆ.
ರಸಗೊಬ್ಬರ ದಂಧೆಯು ಅವ್ಯಾಹತವಾಗಿ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕೇವಲ ಸಣ್ಣಪುಟ್ಟ ಅಧಿಕಾರಿಗಳ ವಿರುದ್ಧ ನಾಮಕಾವಸ್ಥೆಗೆ ದೂರು ದಾಖಲಿಸಿಕೊಂಡು ಹಗರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಬಿ.ಸಿ.ಪಾಟೀಲ್ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
No comments:
Post a Comment