Saturday, May 14, 2022

ಮೇ.೧೬ರಂದು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ :

ವಿಜೃಂಭಣೆಯಿಂದ ಜರುಗಿದ ಗರುಡೋತ್ಸವ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಶನಿವಾರ ಗರುಡೋತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಮೇ. ೧೪: ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಶನಿವಾರ ಗರುಡೋತ್ಸವ ವಿಜೃಂಭಣೆಯಿಂದ ಜರುಗಿತು.
    ಬೆಳಿಗ್ಗೆ ಯಾಗಶಾಲೆ ಪ್ರವೇಶ, ಧ್ವಜಾರೋಹಣ ನಂತರ ಗರುಡವಾಹನದಲ್ಲಿ ನಗರದ ಪ್ರಮುಖಬೀದಿಗಳಲ್ಲಿ ಭೂದೇವಿ ಶ್ರೀದೇವಿಸಹಿತನಾಗಿ ವಿರಾಜಮಾನನಾದ ಶ್ರೀನಿವಾಸ ದೇವರ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು. ನಂತರ ಅಷ್ಟಾವಧಾನ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಶುಕ್ರವಾರ ಸಂಜೆ ಗಣಪತಿಪೂಜೆ, ಭೂಮಿ ಪೂಜೆ ನಡೆಸಿ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿರುವ ವಿಗ್ರಹಗಳಿಗೆ ಕಂಕಣಧಾರಣೆ ನಡೆಯಿತು.
    ಮೇ.೧೫ರಂದು ಬೆಳಿಗ್ಗೆ ಶ್ರೀ ನರಸಿಂಹ ಜಯಂತಿ, ವಸಂತ ಸೇವೆ, ಅಷ್ಟಾವಧಾನ, ಮಹಾಮಂಗಳಾರತಿ, ಸಂಜೆ ಕಲ್ಯಾಣೋತ್ಸವ ನಡೆಯಲಿದೆ. ಮೇ.೧೬ರಂದು ಮಧ್ಯಾಹ್ನ ಬ್ರಹ್ಮ ರಥೋತ್ಸವ ನಡೆಯಲಿದೆ.
    ಮೇ.೧೭ರಂದು ಬೆಳಿಗ್ಗೆ ಗಜವಾಹನೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ, ಸಂಜೆ ಶೇಷವಾಹನೋತ್ಸವ, ೧೮ರಂದು ಬೆಳಿಗ್ಗೆ ಉತ್ಸವ, ಸಂಧಾನಸೇವೆ, ಅವಭೃತ ಸ್ನಾನ, ಹನುಮಂತೋತ್ಸವ, ಪೂರ್ಣಾಹುತಿ, ಧ್ವಜಾವತರಣ, ದೇವತಾಸಂಪ್ರೋಕ್ಷಣೆ, ಅಷ್ಟಾವಧಾನ, ಮಹಾಮಂಗಳಾರತಿ ಹಾಗು ೧೯ರಂದು ಬೆಳಿಗ್ಗೆ ಮಹಾಭಿಷೇಕ, ಅಷ್ಟಾವಧಾನ, ಮಹಾಮಂಗಳಾರತಿ, ಸಂಜೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.


No comments:

Post a Comment