Tuesday, May 24, 2022

ಶ್ರೀ ಗುರುಸಿದ್ಧ ಶಿವಾಚಾರ್ಯರ ದಾಸೋಹ ಭವನಕ್ಕೆ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಲಿಂಗೈಕ್ಯ ಶ್ರೀ ಗುರುಸಿದ್ಧ ಶಿವಾಚಾರ್ಯರ ದಾಸೋಹ ಭವನಕ್ಕೆ ಮಂಗಳವಾರ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಿದರು.
    ಭದ್ರಾವತಿ, ಮೇ. ೨೪:  ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಲಿಂಗೈಕ್ಯ ಶ್ರೀ ಗುರುಸಿದ್ಧ ಶಿವಾಚಾರ್ಯರ ದಾಸೋಹ ಭವನಕ್ಕೆ ಮಂಗಳವಾರ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಿದರು.
    ಬಾಳೆಹೊನ್ನೂರು ಮಠ ಯಡಿಯೂರು ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗು ಬೆಟ್ಟಳ್ಳಿ ಮಠದ ಶ್ರೀಗಳು ಉಪಸ್ಥಿತರಿದ್ದರು.
    ಶಾಸಕ ಬಿ.ಕೆ ಸಂಗಮೇಶ್ವರ್, ಮಠದ ಗೌರವಾಧ್ಯಕ್ಷ ಟಿ.ವಿ ಈಶ್ವರಯ್ಯ, ಚಿದಾನಂದ ಸ್ವಾಮಿ, ಸಿದ್ದಲಿಂಗಯ್ಯ, ವಾಗೀಶ್, ಮಂಜುನಾಥ್, ಲೋಕೇಶ್ ರಾವ್, ಲಂಬೋದರ, ಅರ್ಜುನ್ ರಾವ್, ಶೈಲೇಶ್ ಕೋಠಿ, ದೂದಾ ನಾಯ್ಕ, ವಸಂತಕುಮಾರ್ ಹಾಗು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಪದಾಧಿಕಾರಿಗಳು ಹಾಗೂ ಶ್ರೀಮಠದ ಭಕ್ತರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

No comments:

Post a Comment