Friday, May 20, 2022

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಎಸ್.ಕೆ ಸೃಜನಾ ೬೨೨ ಅಂಕ

ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಮಗ್ರ ಶಿಕ್ಷಣ ಸಂಸ್ಥೆಯ ಈಶ್ವರಮ್ಮ ಪ್ರೌಢಶಾಲೆ ವಿದ್ಯಾರ್ಥಿನಿ ಎಸ್.ಕೆ ಸೃಜನಾ ೬೨೫ಕ್ಕೆ ೬೨೨ ಅಂಕದೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಈ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಅಭಿನಂದಿಸಿದರು.
    ಭದ್ರಾವತಿ, ಮೇ. ೨೦: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಈಶ್ವರಮ್ಮ ಪ್ರೌಢಶಾಲೆ ಉತ್ತಮ ಫಲಿತಾಂಶ ಪಡೆದುಕೊಂಡಿದ್ದು, ವಿದ್ಯಾರ್ಥಿನಿ ಎಸ್.ಕೆ ಸೃಜನಾ ೬೨೫ಕ್ಕೆ ೬೨೨ ಅಂಕದೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ.
    ಆಂಗ್ಲ ವಿಭಾಗ ಶೇ.೯೮ರಷ್ಟು ಹಾಗು ಕನ್ನಡ ವಿಭಾಗ ಶೇ.೯೦ರಷ್ಟು ಫಲಿತಾಂಶ ಪಡೆದುಕೊಂಡಿವೆ. ಆಂಗ್ಲ ವಿಭಾಗದಲ್ಲಿ ೯೨ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಈ ಪೈಕಿ ೯೦ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕನ್ನಡ ವಿಭಾಗದಲ್ಲಿ ೩೯ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಈ ಪೈಕಿ ೩೫ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
    ಆಂಗ್ಲ ವಿಭಾಗದಲ್ಲಿ ೨೯ ಮತ್ತು ಕನ್ನಡ ವಿಭಾಗದಲ್ಲಿ ೫ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದು, ಆಂಗ್ಲ ವಿಭಾಗದಲ್ಲಿ ೫೫ ಮತ್ತು ಕನ್ನಡ ವಿಭಾಗದಲ್ಲಿ ೨೫ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗು ಆಂಗ್ಲ ವಿಭಾಗದಲ್ಲಿ ೬ ಮತ್ತು ಕನ್ನಡ ವಿಭಾಗದಲ್ಲಿ ೫ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
    ಎಸ್.ಕೆ ಸೃಜನಾ ೬೨೨, ಜೆ. ದರ್ಶನ್ ೬೧೬, ಬಿ.ಇ ರಕ್ಷಿತ ೬೧೪, ಎನ್. ರಕ್ಷಿತ ೬೧೩, ಎನ್. ಕುಶಾಲ್ ೬೧೧, ಎಸ್. ನಾಗಶ್ರೀ ೬೦೮, ಬಿ.ಎಂ ಅಪೂರ್ವ ೬೦೮ ಮತ್ತು ಎಸ್. ಹರ್ಷಿತ ೬೦೫ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.  
    ಹಿರಿಯೂರು ಗ್ರಾಮದ ನಿವಾಸಿ ಸತೀಶ್ ಕಡ್ಕರ್ ಮತ್ತು ಎಸ್. ಶೃತಿ ದಂಪತಿ ಪುತ್ರಿಯಾಗಿರುವ ಈ ಶಾಲೆಯ ವಿದ್ಯಾರ್ಥಿನಿ ಎಸ್.ಕೆ ಸೃಜನಾ ೬೨೫ಕ್ಕೆ ೬೨೨ ಅಂಕ ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿದ್ದು, ಉತ್ತಮ ಫಲಿತಾಂಶಕ್ಕೆ ಕಾರಣಕರ್ತರಾಗಿರುವ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗು ಪೋಷಕರಿಗೆ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ ಬೀರಯ್ಯ ಕೃತಜ್ಞತೆ ಸಲ್ಲಿಸಿದ್ದು, ಅಲ್ಲದೆ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಅಭಿನಂದನೆ :
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿನಿ ಎಸ್.ಕೆ ಸೃಜನಾ ಅವರನ್ನು ಶಾಲು ಹೊದಿಸಿ, ಹೂವಿನ ಹಾರ ಹಾಕಿ ಸನ್ಮಾನಿಸಿ ಅಭಿನಂದಿಸಿದರು.
    ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಪರಮೇಶ್ವರಪ್ಪ, ಮೃತ್ಯುಂಜಯ ಕಾನಿಟ್ಕರ್, ಶಾಮರಾಯ ಆಚಾರ್, ಶಿಕ್ಷಣ ಇಲಾಖೆ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment