Sunday, May 29, 2022

ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

ಭದ್ರಾವತಿಯಲ್ಲಿ ಶ್ರೀ ವಿನಾಯಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಭಾನುವಾರ ಶ್ರೀರಾಮನಗರದ ಶ್ರಮಜೀವಿ ಮರಿಸಿದ್ದಯ್ಯ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ ಬುಕ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.
    ಭದ್ರಾವತಿ, ಮೇ. ೨೯: ಶ್ರೀ ವಿನಾಯಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಭಾನುವಾರ ಶ್ರೀರಾಮನಗರದ ಶ್ರಮಜೀವಿ ಮರಿಸಿದ್ದಯ್ಯ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ ಬುಕ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.
    ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಟ್ರಾವೆಲ್ಸ್ ಮಾಲೀಕ ಮತ್ತು ಸಿವಿಲ್ ಗುತ್ತಿಗೆದಾರ ಎ. ಧರ್ಮೇಂದ್ರ ಪ್ರತಿವರ್ಷ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್‌ಬುಕ್‌ಗಳನ್ನು ವಿತರಿಸುತ್ತಿದ್ದು, ಈ ಬಾರಿ ಒಟ್ಟು ೧೫೦೦ ನೋಟ್ ಬುಕ್‌ಗಳನ್ನು ವಿತರಿಸಿದರು.
    ಬಾಬಳ್ಳಿ, ಕಾಗೇಕೋಡಮಗ್ಗಿ, ಜಯನಗರ, ವೀರಾಪುರ, ರಾಮನಗರ, ಕುಮರಿನಾರಾಯಣಪುರ ಮತ್ತು ತಳ್ಳಿಕಟ್ಟೆ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ ಬುಕ್‌ಗಳನ್ನು ವಿತರಿಸಲಾಯಿತು.
    ಯು. ಹರೀಶ್‌ರಾವ್, ಸಿ. ಹರಿಬಾಬು, ಸಿ.ಎಸ್ ನಾಗರಾಜ್, ಮಮತ, ರೂಪವತಿ, ಮಂಗಳ ಗೌರಮ್ಮ, ಶಶಿಕುಮಾರ, ಪರಮೇಶ್ವರಪ್ಪ, ಸತ್ಯನಾರಾಯಣ, ಸುರೇಶ್, ಗಂಗಣ್ಣ, ಕಾವೇರಮ್ಮ ಮತ್ತು ಗಣೇಶ್ ಕಲ್ಲೇರಿ, ಆಶಾರಾಣಿ ಧರ್ಮೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶಿವಲಿಂಗೇಗೌಡ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment