ಭದ್ರಾವತಿ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ವಿ.ಎಚ್ ಪಂಚಾಕ್ಷರಿ ಬುಧವಾರ ಅಧಿಕಾರ ಸ್ವೀಕರಿಸಿದರು.
ಭದ್ರಾವತಿ, ಮೇ. ೧೮: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ವಿ.ಎಚ್ ಪಂಚಾಕ್ಷರಿ ಬುಧವಾರ ಅಧಿಕಾರ ಸ್ವೀಕರಿಸಿದರು.
ಸುಮಾರು ೨ ವರ್ಷಗಳಿಂದ ತೆರವಾಗಿದ್ದ ಹುದ್ದೆಯಲ್ಲಿ ಮುಖ್ಯ ಶಿಕ್ಷಕ ಗಣೇಶ್ರವರು ಪ್ರಭಾರ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಸೊರಬ ತಾಲೂಕಿನಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ವಿ.ಎಚ್ ಪಂಚಾಕ್ಷರಿ ಅವರನ್ನು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರ. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಭಾರ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್, ಶಿಕ್ಷಣ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ವಿ.ಎಚ್ ಪಂಚಾಕ್ಷರಿ ಅವರನ್ನು ಅಭಿನಂದಿಸಿದರು.
No comments:
Post a Comment