Saturday, May 7, 2022

ಸುಮಾರು ೭ ಅಡಿ ಉದ್ದದ ಹೆಬ್ಬಾವು ಸೆರೆ : ಹಾವುಗಳ ರಕ್ಷಣೆಯಲ್ಲಿ ತೊಡಗಿರುವ ಅರುಣ್


ಭದ್ರಾವತಿ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಕಾಣಿಸಿಕೊಂಡ ಸುಮಾರು ೭ ಅಡಿ ಉದ್ದದ ಹೆಬ್ಬಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಅರುಣ್ ಎಂಬುವರು ಯಶಸ್ವಿಯಾಗಿದ್ದಾರೆ.

ಭದ್ರಾವತಿ, ಮೇ. ೭: ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಕಾಣಿಸಿಕೊಂಡ ಸುಮಾರು ೭ ಅಡಿ ಉದ್ದದ ಹೆಬ್ಬಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಅರುಣ್ ಎಂಬುವರು ಯಶಸ್ವಿಯಾಗಿದ್ದಾರೆ.
ಕೂಲಿ ಕೆಲಸದೊಂದಿಗೆ ಹಾವುಗಳನ್ನು ಹಿಡಿಯುವ ಹವ್ಯಾಸದಲ್ಲಿ ತೊಡಗಿಸಿಕೊಂಡಿರುವ ಅರುಣ್ ಹೆಬ್ಬಾವು ಹಿಡಿದು ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಸಮೀಪದ ಗಂಗೂರು ಅರಣ್ಯ ಪ್ರದೇಶಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
ಸುತ್ತಮುತ್ತಲ ಗ್ರಾಮಗಳ ಜನ ವಸತಿ ಪ್ರದೇಶಗಳಲ್ಲಿ ಹಾವುಗಳು ಕಂಡು ಬಂದಲ್ಲಿ ತಕ್ಷಣ ಆಗಮಿಸಿ ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಡುವ ಮೂಲಕ ಹಾವುಗಳ ರಕ್ಷಣೆ ಜೊತೆಗೆ ಜನ, ಜಾನುವಾರಗಳ ಪ್ರಾಣ ರಕ್ಷಣೆಯಲ್ಲೂ ಅರಣ್ ನಿರತರಾಗಿದ್ದು, ಹೆಚ್ಚಿನ ಮಾಹಿತಿಗೆ ಮೊ: ೮೧೯೭೭೦೦೧೬೧ ಸಂಖ್ಯೆಗೆ ಕರೆ ಮಾಡಬಹುದಾಗಿದೆ.


No comments:

Post a Comment