ಮಂಗಳವಾರ, ಮೇ 31, 2022

ಗಾಯತ್ರಿ ಕ್ರೆಡಿಟ್ ಕೋ ಆಪರೇಟ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ. ಮಂಜುನಾಥ್ ಅವಿರೋಧ ಆಯ್ಕೆ

ಭದ್ರಾವತಿ ಜನ್ನಾಪುರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ. ಮಂಜುನಾಥ್ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಮೇ. ೩೧: ಜನ್ನಾಪುರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ. ಮಂಜುನಾಥ್ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಜೆ.ಎಂ ಆನಂದ್‌ರಾವ್ ರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಕೆ. ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಶ್ರೀಧರ್ ಎಂಬುವರು ಸೊಸೈಟಿ ಕಾರ್ಯ ನಿರ್ವಹಿಸಲು ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಸಮೀಪದಲ್ಲಿ ಕಟ್ಟಡ ದಾನ ಮಾಡಿದ್ದು, ನೂತನ ಕಟ್ಟಡದಲ್ಲಿ ಸೊಸೈಟಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.
    ಎಲ್ಲಾ ನಿರ್ದೇಶಕರು ಒಮ್ಮತದಿಂದ ಕೆ. ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡವಲ್ಲಿ ಯಶಸ್ವಿಯಾಗಿದ್ದಾರೆ. ಉಪಾಧ್ಯಕ್ಷ ಕೇಶವಮೂರ್ತಿ, ಸಿ.ಕೆ ರಾಮಣ್ಣ,  ಶ್ವೇತಾ, ತಾರಾಮಣಿ, ನೀಲಕಂಠ ಜೊಯ್ಸ್, ಸುಬ್ರಮಣ್ಯ, ರಮಾಕಾಂತ್, ಕಾರ್ಯದರ್ಶಿ ಶಶಿಧರ್, ವಾಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ